'ಸಾಹಿತಿಗಳೂ ರಾಜಕಾರಣಿಗಳೇ' ಎಂಬ ಡಿಸಿಎಂ ಹೇಳಿಕೆಗೆ ತಿರುಗಿಬಿದ್ದ ಪ್ರಗತಿಪರರು!

Published : Jun 22, 2024, 04:02 PM IST
'ಸಾಹಿತಿಗಳೂ ರಾಜಕಾರಣಿಗಳೇ' ಎಂಬ ಡಿಸಿಎಂ ಹೇಳಿಕೆಗೆ ತಿರುಗಿಬಿದ್ದ ಪ್ರಗತಿಪರರು!

ಸಾರಾಂಶ

'ಸಾಹಿತಿಗಳೂ ರಾಜಕಾರಣಿಗಳೇ' ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದ್ದು ಪ್ರಗತಿಪರರ ಆಕ್ರೋಶ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಗದಗ (ಜೂ.22): 'ಸಾಹಿತಿಗಳೂ ರಾಜಕಾರಣಿಗಳೇ' ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದ್ದು ಪ್ರಗತಿಪರರ ಆಕ್ರೋಶ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಗದಗನಲ್ಲಿಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪ್ರಗತಿಪರ ಸಾಹಿತಿ ಬಸವರಾಜ್ ಸೂಳಿಭಾವಿ ಅವರು, ಆ ರೀತಿ ಹೇಳಿಕೆ ನೀಡಿರುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಡಿಸಿಎಂಗೆ ಬುದ್ಧಿ ಹೇಳಲು  ಕೇಳಿಕೊಂಡಿದ್ದೇನೆ. ವಿಚಾರವಾದಿಗಳ, ಪ್ರಗತಿಪರರ ಆಶಯದಂತೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬರಹಗಾರರನ್ನ, ಸಾಹಿತಿಗಳನ್ನ ಅವಮಾನಿಸುವ, ದರ್ಪ ತೋರುವ ಕೃತ್ಯ ದುರಂತವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಾಂಸ್ಕೃತಿಕ ಕ್ಷೇತ್ರಕ್ಕೆ ಸೇರಿದ ಅಕಾಡೆಮಿಗಳು ಸ್ವಾಯತ್ತವಾಗಿ ಕೆಲಸ ಮಾಡುತ್ತವೆ. ಹೀಗಿರುವಾಗ ಅಕಾಡೆಮಿ ಅಧ್ಯಕ್ಷರನ್ನ ಪಕ್ಷದ ಕಚೇರಿಗೆ ಕರೆದು ಸಭೆ ಮಾಡಿದ್ದು ಸಂವಿಧಾನಿಕ ಕ್ರಮ ಅಲ್ಲ. ಸಭೆಯಲ್ಲಿ ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡುವ ಬಗ್ಗೆ ಹೇಳಿದ್ದಾರೆ. ಇಷ್ಟು ಸಾಲದ್ದಕ್ಕೆ ಡಿಸಿಎಂ ಅವರು 'ನಾನೇ ಸಭೆ ಕರೆದಿದ್ದೇನೆ, ಸಾಹಿತಿಗಳೂ ರಾಜಕಾರಣಿಗಳು. ಅದರಲ್ಲಿ ತಪ್ಪೇನಿದೆ' ಅಂತಾರೆ ಪ್ರಶ್ನಿಸಿ ಸಾಂಸ್ಕೃತಿಕ ವಲಯವನ್ನ ಅವಮಾನಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಪಕ್ಷದ ನಿರ್ಧಾರ ಹೀಗಾಗಿ ಪಕ್ಷದ ಕಚೇರಿಯಲ್ಲಿ ಸಭೆ ಕರೆದಿದ್ದೇವೆ ಎಂದು ಸಚಿವ ಶಿವರಾಜ ತಂಗಡಗಿ ಹೇಳ್ತಾರೆ, ಅವರ ಹೇಳಿಕೆಯೇ ಕಾಂಗ್ರೆಸ್ ಪಕ್ಷದ ಸಾಂಸ್ಕೃತಿಕ ಅಧಃಪತನಕ್ಕೆ ಸಾಕ್ಷಿ ಎಂದು ಕಿಡಿಕಾರಿದರು.

ಪೆಟ್ರೋಲ್ ಡೀಸೆಲ್ ದರ ಏರಿಕೆ: ಸಿಎಂ ಆಡಳಿತ ನಡೆಸಲು ಆಗದಿದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಯತ್ನಾಳ್ ಕಿಡಿ

ಪಕ್ಷದ ನಿರ್ಧಾರ ಅನ್ನೋದಾದ್ರೆ ಸಚಿವ ಸಂಪುಟ ಸಭೆಯನ್ನ ಪಕ್ಷದ ಕಚೇರಿಯಲ್ಲಿ ಕರೆಯಿರಿ. ಸಾಂಸ್ಕೃತಿಕ ರಂಗದ ಮೇಲೆ ಹಿಡಿತ ಸಾಧಿಸುವ ಪ್ರಯತ್ನ ಸರಿಯಲ್ಲ. ಸಂಪುಟದ ಸದಸ್ಯರಿಗೆ ತಿಳಿಹೇಳುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೇಳಿಕೊಂಡಿದ್ದೇವೆ‌‌. ಸಿಎಂ ಮಾತನಾಡುತ್ತಿರೋದು ಅನುಮಾನ ಮೂಡಿಸಿದೆ ಎಂದಿದ್ದಾರೆ.

ಇದೇ ವೇಳೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, 'ಅಕಾಡೆಮಿಯಲ್ಲಿ ಅವಕಾಶ ಸಿಗದವರು ವಿರೋಧಿಸುತ್ತಿದ್ದಾರೆ'ಎಂದು ಹೇಳಿದ್ದಾರೆ. ಸಾಹಿತಿಗಳು ರಾಜಕಾರಣಿಗಳ ಹಿಂದೆ ಓಡಾಡುತ್ತಿದ್ದರು ಅಂತೆಯೂ ಹೇಳಿದ್ದಾರೆ. ಹಾಗಾದರೆ ಹಿಂದೆ ಓಡಾಡಿದ ಸಾಹಿತಿಗಳ ಬಗ್ಗೆ ದಾಖಲೆ ಸಮೇತ ಬಿಡುಗಡೆ ಮಾಡಲಿ, ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಪಡೆಯಲಿ ಎಂದು ರಮೇಶ್ ಬಾಬುಗೆ ಸವಾಲು ಹಾಕಿದರು.

ನಾನು, ಪ್ರಿಯಾಂಕ್ ಖರ್ಗೆ ಅಭಿವೃದ್ಧಿ ಬಗ್ಗೆ ಮಾತ್ರ ಮಾತಾಡ್ತೇವೆ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಕಾಂಗ್ರೆಸ್ ಪಕ್ಷವನ್ನ ಜನರಿಂದ ದೂರ ತೆಗೆದುಕೊಂಡು ಹೋಗುವ ಕೆಲಸವನ್ನ ಡಿಸಿಎಂ, ಸಚಿವ ತಂಗಡಗಿ ಮಾಡ್ತಿದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!