
ರಾಯಚೂರು, (ಮೇ.01): ಕೊರೋನಾ ತಡೆಗೆ ಲಾಕ್ಡೌನ್ ಅಗತ್ಯವಾಗಿದ್ದು, ಇದನ್ನ ಬಿಟ್ಟರೆ ಬೇರೆ ಮಾರ್ಗವೇ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ರಾಯಚೂರಿನಲ್ಲಿ ಇಂದು (ಶನಿವಾರ) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾದ ಚೈನ್ ಲಿಂಕ್ ತಪ್ಪಿಸಲು ಸಂಚಾರ ಸ್ತಬ್ಧವಾಗಬೇಕಿದೆ. ಜನರ ಅನಾವಶ್ಯಕ ಓಡಾಟ, ಸಭೆ, ಸಮಾರಂಭಗಳನ್ನ ಬಂದ್ ಮಾಡಬೇಕಿದೆ ಎಂದರು.
ಕೊರೊನಾ ಗೆದ್ದ ರಾಯಚೂರಿನ ಮುತ್ತಜ್ಜಿಯ ಒಳ್ಳೇ ಕತೆ
ಲಾಕ್ಡೌನ್ ಎಂದು ಕರೆಯದಿದ್ದರೂ, ಸರ್ಕಾರ ವಿಧಿಸಿರೋ ನಿಯಮಗಳು ಲಾಕ್ಡೌನ್ ಸ್ವರೂಪದಲ್ಲಿಯೇ ಇವೆ. ಸಾಮಾಜಿಕ ಅಂತರ ಪಾಲನೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ಸರ್ಕಾರಕ್ಕೆ ಸಹಕರಿಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಇನ್ನು ಕೊರೋನಾ ವೇಳೆ ಖಾಸಗಿ ವೈದ್ಯರ ಹಣ ವಸೂಲಿ ಆರೋಪದ ಬಗ್ಗೆ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ವೈದ್ಯರು ಮಾನವೀಯತೆಯಿಂದ ವರ್ತಿಸಬೇಕು. ವೈದ್ಯರು ಜನರ ಶಾಪಕ್ಕೆ ಗುರಿ ಆಗುವ ಕೆಲಸ ಮಾಡಬಾರದು. ಇಂತಹ ವೇಳೆಯಲ್ಲಿ ವೈದ್ಯರು ನಮ್ಮ ಪಾಲಿನ ದೇವರು. ದೇವರು ನಮಗೆ ಅನ್ಯಾಯ ಮಾಡುವ ಕೆಲಸ ಮಾಡಬಾರದು ಎಂದು ವೈದ್ಯರಲ್ಲಿ ವಿನಂತಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ