
ಬೆಂಗಳೂರು(ಜು.21): ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ಲಾಕ್ಡೌನ್ ವಿಸ್ತರಣೆ ಆಗುವ ಸಾಧ್ಯತೆ ಬಹುತೇಕ ಕ್ಷೀಣಿಸಿದೆ. ಹೀಗಾಗಿ ಬುಧವಾರದಿಂದ ಜನಜೀವನ ಹಾಗೂ ಆರ್ಥಿಕ ಚಟುವಟಿಕೆಗಳು ಎಂದಿನಂತೆ ಆರಂಭವಾಗುವ ನಿರೀಕ್ಷೆಯಿದೆ.
ಹಾಲಿ ಜಾರಿಯಲ್ಲಿರುವ ಬುಧವಾರ ಬೆಳಗ್ಗೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಆದರೆ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರ ಲಾಕ್ಡೌನ್ಗೆ ಸಂಬಂಧಿಸಿದ ಈ ಹಿಂದಿನ ಆದೇಶಗಳು ಎಂದಿನಂತೆ ಜಾರಿಯಿರುತ್ತವೆ. ಲಾಕ್ಡೌನ್ ಅಂತ್ಯಗೊಳ್ಳುವ ಕುರಿತು ಮಂಗಳವಾರ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.
ಆತಂಕದ ನಡುವೆ ಶುಭಸುದ್ದಿ: ಕರ್ನಾಟಕದಲ್ಲಿ ಶೇಕಡ ಸೋಂಕು ಇಳಿಮುಖ!
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಬೆಂಗಳೂರಿನ ಸಚಿವರು, ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದರು. ಈ ವೇಳೆ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ವಿಸ್ತೃತ ಮಾಹಿತಿಯನ್ನು ಪಡೆದುಕೊಂಡರು. ಜತೆಗೆ, ಲೌಕ್ಡೌನ್ ಅವಧಿಯಲ್ಲಿ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬಂದಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ