
ಬೆಳಗಾವಿ (ಮಾ.16): ಇಂದು ಲೋಕಸಭ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಬೆಳಗಾವಿ ಮೇಯರ್ ನಡುರಸ್ತೆಯಲ್ಲೇ ಸರ್ಕಾರಿ ವಾಹನ ಬಿಟ್ಟು ಆಟೋದಲ್ಲಿ ಮನೆಗೆ ಹೊರಟ ಘಟನೆ ನಡೆದಿದೆ.
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಸವಿತಾ ಕಾಂಬಳೆ. ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಬೆಳಗಾವಿ ಕೊಲ್ಲಾಪುರ ವೃತ್ತದಲ್ಲಿ ಕಾರು ನಿಲ್ಲಿಸಿ ಒಂದಷ್ಟು ದೂರ ನಡೆದುಕೊಂಡೇ ಹೋದ ಮೇಯರ್ ಅಲ್ಲಿಂದ ಆಟೋ ಹತ್ತಿ ಮನೆಗೆ ತೆರಳಿದರು. ಸರ್ಕಾರಿ ವಾಹನಬಿಟ್ಟು ಮನೆಗೆ ಹೋಗುವ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಮೇಯರ್ ಸವಿತಾ ಕಾಂಬಳೆ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಮಾರ್ಚ್ 28ರಂದು ಚುನಾವಣಾ ಅಧಿಸೂಚನೆ ಪ್ರಕಟ. ಏಪ್ರಿಲ್ 4ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಆ ಬಳಿಕ ಜೂನ್ 4ರಂದು ಮತಗಳ ಎಣಿಕೆ ನಡೆಯಲಿದೆ. ಜೂನ್ 6ಕ್ಕೆ ಚುನಾವಣೆ ಮುಕ್ತಾಯವಾಗಲಿದೆ.
ಅಭ್ಯರ್ಥಿ ಪರ ಪ್ರಚಾರಕ್ಕೆ ಬರಲು ಬಿಜೆಪಿ ಹೈಕಮಾಂಡ್ಗೆ 3 ಪ್ರಶ್ನೆ ಕೇಳಿದ ಸಂಗಣ್ಣ ಕರಡಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ