'ನಾಳೆ ನಾನು ಮನೆಗೆ ಬರ್ತಿನಣ್ಣ ಅಂದೆ, ಬೇಡ ಗುರು ಬರಬೇಡ ಅಂದ್ರು: ಮಾಧುಸ್ವಾಮಿ ಮುನಿಸಿಕೊಂಡ ಬಗ್ಗೆ ವಿ ಸೋಮಣ್ಣ ಮಾತು

Published : Mar 15, 2024, 05:43 PM IST
'ನಾಳೆ ನಾನು ಮನೆಗೆ ಬರ್ತಿನಣ್ಣ ಅಂದೆ, ಬೇಡ ಗುರು ಬರಬೇಡ ಅಂದ್ರು: ಮಾಧುಸ್ವಾಮಿ ಮುನಿಸಿಕೊಂಡ ಬಗ್ಗೆ ವಿ ಸೋಮಣ್ಣ ಮಾತು

ಸಾರಾಂಶ

ನನ್ನ ಆರಾಧ್ಯ ದೈವ ನಡೆದಾಡುವ ದೇವರು ಸಿದ್ದಗಂಗೆ ಶಿವಕುಮಾರ ಗದ್ದುಗೆ ಆಶೀರ್ವಾದ ಪಡೆದಿದ್ದೇನೆ. ನಿನ್ನೆ ಆದಿಚುಂಚನಗಿರಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೆ, ಇಂದು ಸಿದ್ದಗಂಗಾ ಸ್ವಾಮೀಜಿ ಗದ್ದುಗೆ ದರ್ಶನ ಪಡೆದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ತಿಳಿಸಿದರು.

ತುಮಕೂರು (ಮಾ.15): ನನ್ನ ಆರಾಧ್ಯ ದೈವ ನಡೆದಾಡುವ ದೇವರು ಸಿದ್ದಗಂಗೆ ಶಿವಕುಮಾರ ಗದ್ದುಗೆ ಆಶೀರ್ವಾದ ಪಡೆದಿದ್ದೇನೆ. ನಿನ್ನೆ ಆದಿಚುಂಚನಗಿರಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೆ, ಇಂದು ಸಿದ್ದಗಂಗಾ ಸ್ವಾಮೀಜಿ ಗದ್ದುಗೆ ದರ್ಶನ ಪಡೆದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ತಿಳಿಸಿದರು.

ಇಂದು ಸಿದ್ದಗಂಗಾ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಸಾಂಕೇತಿಕವಾಗಿ ಚೆನ್ನಬಸವೇಶ್ವರ ದೇವಸ್ಥಾನದ ದರ್ಶನ ಪಡೆದಿದ್ದೇವೆ. ನಮ್ಮ ಹಿರಿಯ ನಾಯಕರಾದ ಬಿಸಿ ನಾಗೇಶ್ ಮನೆಗೆ ಭೇಟಿ ನೀಡುತ್ತೇನೆ. ಇಂದು ಸಂಜೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಹೋಗುವಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ನಾನು ಹೋಗುತ್ತೇನೆ ಎಂದರು. 

ತುಮಕೂರು ಟಿಕೆಟ್‌ ಕೊಡಿಸುವಂತೆ ಹೆಚ್‌ಡಿಕೆ ಭೇಟಿ ಮಾಡಿ ಮಾತುಕತೆ ನಡೆಸಿದ ಸೋಮಣ್ಣ

ಇನ್ನು ಮಾಜಿ ಸಚಿವ ಮಾಧುಸ್ವಾಮಿ ಜೊತೆಗೆ ನಾನು ನಿನ್ನೆಯೇ ದೂರವಾಣಿ ಮೂಲಕ ಅವರೊಂದಿಗೆ ಮಾತನಾಡಿದ್ದೇನೆ ಆದರೆ ಅವರ ಸ್ವಲ್ಪ ಬೇಜಾರಾಗಿ ಮಾತಾಡ್ತಿದ್ರು. ನಾನು ನಾಳೆ ಮನೆಗೆ ಬರ್ತಿದಿನಿ ಅಣ್ಣ ಅಂದೆ. ಆದರೆ ನೀನು ಬರಬೇಡ ಅಂದ್ರು. ಆಯ್ತು ಅಣ್ಣ ಮನೆಯಲ್ಲಿ ತಂಗಿ ಇರ್ತಾಳೆ ಮಾತಾಡಿಸಿಕೊಂಡು ಹೋಗ್ತೇನೆ ಅಂದೆ. ಆದ್ರೂ ಅವರು, ಬೇಡ ಗುರು ನನ್ನ ಮಾತು ಕೇಳು ಅಂದ್ರು. ಆಯ್ತಣ್ಣ ನಾಲ್ಕು ದಿನ ಕಳೀಲಿ ನಿನ್ನಲ್ಲಿರುವ ದುಗುಡವು ಕಡಿಮೆಯಾಗಲಿ ಆಮೇಲೆ ಬರ್ತಿನಿ ಅಂದೆ.

ಲೋಕಸಭಾ ಚುನಾವಣೆ 2024: ತುಮಕೂರಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸೋಮಣ್ಣ ಮಿಂಚಿನ ಸಂಚಾರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ