ಸಿದ್ದಗಂಗಾ ಮಠ ವಿಶ್ವಕ್ಕೆ ಪರಿಚಯಿಸುವಲ್ಲಿ ನನ್ನ ಸೇವೆಯೂ ಇದೆ: ವಿ ಸೋಮಣ್ಣ

Published : Mar 19, 2024, 11:49 PM IST
ಸಿದ್ದಗಂಗಾ ಮಠ ವಿಶ್ವಕ್ಕೆ ಪರಿಚಯಿಸುವಲ್ಲಿ ನನ್ನ ಸೇವೆಯೂ ಇದೆ: ವಿ ಸೋಮಣ್ಣ

ಸಾರಾಂಶ

ಲೋಕಸಭೆ ಚುನಾವಣೆಯೇ ಬೇರೆ, ವಿಧಾನಸಭೆ ಚುನಾವಣೆಯೇ ಬೇರೆ. ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲಾ ಗೌಣ. ಮೋದಿ ಅವರ ಮುಖ ನೋಡಿ ಎಲ್ಲಾ ಕ್ಷೇತ್ರಗಳಲ್ಲಿ ಜನರಿಂದ ಮತದಾನ ಆಗುತ್ತದೆ ಎಂದು ವಿ ಸೋಮಣ್ಣ ತಿಳಿಸಿದರು.

ಚಿತ್ರದುರ್ಗ (ಮಾ.19): ಯಾರು ಯಾವ ಕಡೆ ಮುಖ ಮಾಡುತ್ತಾರೆ, ಯಾವ ಪಕ್ಷ ಸೇರುತ್ತಾರೆಂಬುದು ಗೌಣ. ದೇಶ ಮುಖ್ಯ, ವೈಯಕ್ತಿಕ ವಿಚಾರ ಇದ್ದಿದ್ದೇ ಎಂದು ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ತಿಳಿಸಿದರು.

ಮಾಜಿ ಸಚಿವ ಜೆ ಮಾಧುಸ್ವಾಮಿ ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 28 ಕ್ಷೇತ್ರಕ್ಕೆ 28 ಅಬ್ಯರ್ಥಿಗಳಿಗೆ ಟಿಕೆಟ್ ಕೊಡ ಬೇಕಾಗುತ್ತದೆ. 28ರ ಬದಲು 29 ಟಿಕೆಟ್ ಕೊಡಲು ಆಗುವುದಿಲ್ಲವಲ್ಲ ಎಂದು ಪ್ರಶ್ನಿಸಿದ ವಿ ಸೋಮಣ್ಣ, ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದೆ ನನಗೂ ತುಮಕೂರಿಗೆ ಅವಿನಾಭಾವ ಸಂಬಂಧವಿದೆ. ಸಿದ್ದಗಂಗಾ ಮಠ ವಿಶ್ವಕ್ಕೆ ಪರಿಚಯಿಸುವಲ್ಲಿ ನನ್ನ ಸೇವೆಯೂ ಇದೆ. ಹೀಗಾಗಿ ಹೈಕಮಾಂಡ್ ಇವತ್ತಿಗೆ ಬೇಡ ಎಂದರೂ ನಾನು ಸಿದ್ಧನಿದ್ದೇನೆ ಎಂದರು.

Lok sabha election 2024: ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ: ಜಗದೀಶ್ ಶೆಟ್ಟರ್

ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು. ದೇಶಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಮಾಧುಸ್ವಾಮಿ ಅವರನ್ನು ಭೇಟಿ ಮಾಡಲು ಒಮ್ಮೆ ಕೇಳಿದೆ ಆದರೆ ಅವರು ಬರಬೇಡ ಎಂದರು. ಇನ್ನೊಮ್ಮೆ ಕೇಳಿ ನೋಡುತ್ತೇನೆ ಬಾ ಎಂದರೆ ಭೇಟಿಗೆ ಹೋಗುತ್ತೇನೆ. ಮಾಧುಸ್ವಾಮಿಗೆ ಟಿಕೆಟ್ ಕೊಟ್ಟಿದ್ದರೂ ನಾನು ಕೆಲಸ ಮಾಡುತ್ತಿದ್ದೆ. ಬಸವರಾಜುಗೆ ಟಿಕೆಟ್ ಕೊಟ್ಟಾಗ ನಾನು ಕೆಲಸ ಮಾಡಿದ್ದೇನೆ. ಮಾಧುಸ್ವಾಮಿ ಬುದ್ಧಿವಂತರು, ಪ್ರಜ್ಞಾವಂತರು. ಅವರ ತೀರ್ಮಾನ ಏನು ಎಂಬುದು ನನಗೆ ಗೊತ್ತಿಲ್ಲ ಎಂದರು.

Somanna meets Yediyurappa: ತುಮಕೂರು ‘ಲೋಕ’ ಟಿಕೆಟ್ ಮೇಲೆ ಸೋಮಣ್ಣ ಕಣ್ಣು: ಮುನಿಸು ಮರೆತು ಬಿಎಸ್‌ವೈ ಭೇಟಿ !

ಲೋಕಸಭೆ ಚುನಾವಣೆಯೇ ಬೇರೆ, ವಿಧಾನಸಭೆ ಚುನಾವಣೆಯೇ ಬೇರೆ. ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲಾ ಗೌಣ. ಮೋದಿ ಅವರ ಮುಖ ನೋಡಿ ಎಲ್ಲಾ ಕ್ಷೇತ್ರಗಳಲ್ಲಿ ಜನರಿಂದ ಮತದಾನ ಆಗುತ್ತದೆ. ದೇಶಕ್ಕೆ ಮೋದಿ ಬೇಕು ಎಂಬ ಕಾರಣಕ್ಕೆ ಜನರಿಂದ ಮತದಾನ ಮಾಡುತ್ತಾರೆ. ಕೆಎಸ್ ಈಶ್ವರಪ್ಪ ಸಹ ನುರಿತ ರಾಜಕಾರಣಿ. ನಾನು ಅವರ ಅಭಿಮಾನಿ. ಟಿಕೆಟ್ ಸಿಗದ ವಿಚಾರವಾಗಿ ಅವರಿಗೆ ನೋವಾಗಿರೋದು ನಿಜ. ಆದರೆ ಎರಡು ಮೂರು ದಿನದಲ್ಲಿ ಸರಿಯಾಗಲಿದೆ. ಅವರು ನಮ್ಮ ಪಕ್ಷದ ಬೆನ್ನೆಲುಬು, ಕೇಂದ್ರದ ನಾಯಕರು ಸರಿ ಮಾಡುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!