ಲೋಕಸಭಾ ಚುನಾವಣೆ ರಣತಂತ್ರ; ನಾಳೆ ಸಚಿವ ಸಂತೋಷ್ ಲಾಡ್ ದೆಹಲಿಗೆ

Published : Aug 01, 2023, 05:00 AM ISTUpdated : Aug 01, 2023, 05:02 AM IST
ಲೋಕಸಭಾ ಚುನಾವಣೆ ರಣತಂತ್ರ; ನಾಳೆ ಸಚಿವ ಸಂತೋಷ್ ಲಾಡ್ ದೆಹಲಿಗೆ

ಸಾರಾಂಶ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆ.2ರಂದು ಸಭೆ ಕರೆದಿದ್ದಾರೆ. ಅದರಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆ, ಪಾಲಿಸಿ ವಿಚಾರದ ಬಗ್ಗೆ ಮಾತನಾಡಲಿದ್ದಾರೆ. ಅದಕ್ಕಾಗಿ ಈ ಸಭೆಯನ್ನು ಕರೆಯಲಾಗಿದೆ ಎಂದರು.

ಹುಬ್ಬಳ್ಳಿ (ಆ.1) :  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆ.2ರಂದು ಸಭೆ ಕರೆದಿದ್ದಾರೆ. ಅದರಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆ, ಪಾಲಿಸಿ ವಿಚಾರದ ಬಗ್ಗೆ ಮಾತನಾಡಲಿದ್ದಾರೆ. ಅದಕ್ಕಾಗಿ ಈ ಸಭೆಯನ್ನು ಕರೆಯಲಾಗಿದೆ ಎಂದರು.

ಅಸಮಾಧಾನಿತ ಶಾಸಕರ ಬಗ್ಗೆ ಅಲ್ಲಿ ಏನಾದರೂ ಚರ್ಚೆಯಾಗುತ್ತದೆಯೇ ಎಂಬ ಪ್ರಶ್ನಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿ ಎಲ್ಲೂ ಅಸಮಾಧಾನವಿಲ್ಲ ಎಂದಷ್ಟೇ ಹೇಳಿದರು.

ಅಸಮಾಧಾನಿತ ಶಾಸಕರು ನೀಡಿರುವ ಲೆಟರ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿದು ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಎಲ್ಲಿ ಹರಿದಿದ್ದಾರೆ. ನನಗೇನು ಆ ಬಗ್ಗೆ ಗೊತ್ತಿಲ್ಲ. ನಾನು ಆ ಸಭೆಯಲ್ಲಿದ್ದೆ. ಸಿದ್ದರಾಮಯ್ಯ ಯಾವ ಲೇಟರ್‌ನ್ನೂ ಹರಿದು ಹಾಕಿಲ್ಲ ಎಂದರು.

ಅಧಿಕಾರಿಗಳೇ ಹಳ್ಳಿಗಳಿಗೆ ಹೋಗಿ ಜನರ ಸಮಸ್ಯೆ ಕೇಳಿ, ಸರಕಾರದ ನೆರವು ತಲುಪಿಸಿ: ಸಚಿವ ಸಂತೋಷ ಲಾಡ್ ಆದೇಶ

ಕಾರ್ಮಿಕ ಕಲ್ಯಾಣ ನಿಧಿಯಡಿ .13 ಸಾವಿರ ಕೋಟಿ ಇದೆ. ಅದರ ಬಳಕೆಗೆ ಹೊಸ ಹೊಸ ಕಾರ್ಯಕ್ರಮಗಳನ್ನು ಇನ್ನೊಂದು ತಿಂಗಳಲ್ಲಿ ಮಾಡಲಾಗುವುದು ಎಂದು ನುಡಿದರು. ಇನ್ನು ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಉದ್ದೇಶದಿಂದ ಪಾಲಿಸಿ ಮಾಡುತ್ತಿದ್ದೇವೆ. ಅದೇನಾದರೂ ಜಾರಿಯಾದರೆ ಆಟೋ ಚಾಲಕರು, ಗ್ಯಾರೇಜ್‌ ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ
ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ