ಹಿಂದೆಂದಿಗಿಂತ ಹೆಚ್ಚು ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಂಡು ಬರುತ್ತೇವೆ: ನಳೀನ್ ಕುಮಾರ ಕಟೀಲ್

Published : Mar 17, 2024, 09:00 PM IST
ಹಿಂದೆಂದಿಗಿಂತ ಹೆಚ್ಚು ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಂಡು ಬರುತ್ತೇವೆ: ನಳೀನ್ ಕುಮಾರ ಕಟೀಲ್

ಸಾರಾಂಶ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹಿಂದೆಂದಿಗಿಂತಲೂ ಅತೀ ಹೆಚ್ಚು ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

ಮಂಗಳೂರು (ಮಾ.17): ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹಿಂದೆಂದಿಗಿಂತಲೂ ಅತೀ ಹೆಚ್ಚು ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

ಇಂದು ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಂಸದ ಕಟೀಲ್, ಒಂದೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಹತ್ತಕ್ಕೂ ಹೆಚ್ಚು ಸಮರ್ಥ ನಾಯಕರಿದ್ದಾರೆ. ಜಿಲ್ಲೆಯಲ್ಲಿ ಒಂದು ರಾಜಕೀಯ ಪಕ್ಷಗಳಲ್ಲಿರೋ ಸಮಸ್ಯೆ ಇದೆ. ನಮ್ಮಲ್ಲಿ ನಾಯಕತ್ವದ ಗೊಂದಲ ಇದೆ. ಆದರೆ ಭಾರತ ಮಾತೆಗಾಗಿ, ನರೇಂದ್ರ ಮೋದಿಯವರಿಗೆ ಇವೆಲ್ಲ ಗೊಂದಲವನ್ನು ಬದಿಗಿಟ್ಟು ಕೆಲಸ ಮಾಡುತ್ತಾರೆ. ಪುತ್ರನಿಗೆ ಟಿಕೆಟ್ ಸಿಗದ ವಿಚಾರವಾಗಿ ಹಿರಿಯ ನಾಯಕ ಈಶ್ವರಪ್ಪ ಮುನಿಸಿಕೊಂಡಿದ್ದಾರೆ. ಈಶ್ವರಪ್ಪ ಜೊತೆ ನಾಯಕರು ಮಾತುಕತೆ ನಡೆಸಿ ಅದೆಲ್ಲಾ ಬಗೆಹರಿಸುತ್ತಾರೆ ಎಂದರು.

ಎಚ್‌ಡಿ ಕುಮಾರಸ್ವಾಮಿಗೆ ಮಾ.21ಕ್ಕೆ ಶಸ್ತ್ರಚಿಕಿತ್ಸೆ: ಚನ್ನಪಟ್ಟಣ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಮಾವೇಶ ದಿಢೀರ್ ರದ್ದು!

ನನಗೆ ಕೇರಳದ ಚುನಾವಣೆ ಕೂಡ ನೋಡಿಕೊಳ್ಳಿ ಅಂತಾ ವರಿಷ್ಠರು ಹೇಳಿದ್ದಾರೆ. ಆದರೆ ನಾನು ನನ್ನ ಕ್ಷೇತ್ರಕ್ಕೆ ಹೆಚ್ಚು ಸಮಯ ನೀಡುತ್ತೇನೆ ಎಂದರು.

ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಬರುತ್ತೆ ಈಗಿನಿಂದಲೇ ತಯಾರಾಗಿ ಎಂದು ಕಾರ್ಯಕರ್ತರಿಗೆ ಸೂಚಿಸಿದರು. ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲ್ಲುತ್ತದೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗುತ್ತಾರೆ ಈ ಬಗ್ಗೆ ನಮಗೆ ಅತ್ಯಂತ ಸ್ಪಷ್ಟ ವಿಶ್ವಾಸವಿದೆ ಎಂದರು.

ಸಂವಿಧಾನ ಉಳಿಸಲು ಕೋಮುವಾದಿ ಬಿಜೆಪಿಯನ್ನ ಸೋಲಿಸಿ: ಮುಖ್ಯಮಂತ್ರಿ ಚಂದ್ರು ಕರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್