'ಕಳ್ಳ' ಇನ್ಸ್ಪೆಕ್ಟರ್ ಗೆ ಚಿನ್ನದ ಪದಕ ಕೊಟ್ಟ ಸಿಎಂ? ಲೋಕಾ ದಾಳಿ ಬೆನ್ನಲ್ಲೇ ಮನೆಬಿಟ್ಟು ಪರಾರಿ!

Published : Apr 02, 2025, 01:05 PM ISTUpdated : Apr 02, 2025, 01:09 PM IST
 'ಕಳ್ಳ' ಇನ್ಸ್ಪೆಕ್ಟರ್ ಗೆ ಚಿನ್ನದ ಪದಕ ಕೊಟ್ಟ ಸಿಎಂ? ಲೋಕಾ ದಾಳಿ ಬೆನ್ನಲ್ಲೇ ಮನೆಬಿಟ್ಟು ಪರಾರಿ!

ಸಾರಾಂಶ

ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವಿಷಯ ತಿಳಿದು ಕುಮಾರ್ ಸ್ಥಳದಿಂದ ಪರಾರಿಯಾಗಿದ್ದಾರೆ. ನಾಗರಭಾವಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರರಿಗೆ ಕಿರುಕುಳ ನೀಡಿ, ಸುಳ್ಳು ಕೇಸ್ ಹಾಕಿರುವ ಆರೋಪ ಕುಮಾರ್ ಮೇಲಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಬೆಂಗಳೂರು (ಎ.2): ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್ಪೆಕ್ಟರ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ. ಮನೆಗೆ ಲೋಕಾಯುಕ್ತ ದಾಳಿಯಾಗುತ್ತಿದೆ ಎಂಬ ವಿಚಾರ ತಿಳಿದ ತಕ್ಷಣ  ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ. ಸಿಎಂ ಮೆಡಲ್ ಗೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್‌ ಮನೆ ಮೇಲೆ ಲೋಕಾಯುಕ್ತ ಇಲಾಖೆ ದಾಳಿ ಮಾಡಲು ಹೋಗಿತ್ತು. ಈ ವಿಚಾರ ತಿಳಿದು ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು  ಕುಮಾರ್‌ ಎಸ್ಕೇಪ್ ಆಗಿದ್ದಾರೆ.

ಅಕ್ರಮ ಗಣಿ ಕೇಸ್: ಎಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ, ಹೈಕೋರ್ಟ್ ಹೇಳಿದ್ದೇನು?

ಮತ್ತೊಂದಡೆ ನಾಗರಭಾವಿಯ ಖಾಸಗಿ ಹೊಟೇಲ್ ನಲ್ಲಿ ಡೀಲ್ ಮಾಡುವ ವೇಳೆ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಲೋಕಾ ದಾಳಿ ನಡೆದಿದೆ. ಹೆಡ್ ಕಾನ್ಸ್ ಸ್ಟೇಬಲ್ ಉಮೇಶ್ (SB), ಪೊಲೀಸ್ ಕಾನ್ ಸ್ಟೇಬಲ್ ಅನಂತ್  ಲೋಕಾ ಬಲೆಗೆ ಬಿದ್ದಿದ್ದಾರೆ. ಹೀಗಾಗಿ ಠಾಣೆಯ ಸಿಬ್ಬಂದಿಗಳ ಜೊತೆಗೆ  ಸಿಕ್ಕಿಬಿದ್ದ ಸಿಬ್ಬಂದಿಗಳ ವಿಚಾರಣೆ ಕೂಡ ನಡೆಯುತ್ತಿದೆ. ಸಂಜೆ 5 ಘಂಟೆಯಿಂದ ಬೆಳಗಿನ ಜಾವದ ವರೆಗೆ ನಡೆದ ವಿಚಾರಣೆ ನಡೆದಿದೆ.

ಕಲಬುರಗಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಾಹಿತಿ ಆಯುಕ್ತ! ಏನಿದು ಪ್ರಕರಣ?

ಘಟನೆ ಏನು?
ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್  ಕಿರುಕುಳ ನೀಡಿರುವ ಆರೋಪವಿದೆ. ಸುಳ್ಳು ಕೇಸ್ ಹಾಕಿ ಚನ್ನೇಗೌಡರ ನಾಲ್ಕು ಕೋಟಿ ಮೌಲ್ಯದ ಮನೆಯನ್ನ ಹೇಳಿದವ್ರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟಿದ್ದಾರೆಂಬುದು ಆರೋಪ. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ಇವ್ರಿಗೂ ಕೂಡ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ಕೊಟ್ಟಿದ್ದಾರೆನ್ನಲಾಗಿದೆ. ಮನೆಯನ್ನು ಬರೆದುಕೊಡಿ  ಇಲ್ಲವಾದರೆ ಈ ಹಿಂದೆ ದಾಖಲಾಗಿದ್ದ ಕೇಸ್ ಒಂದಕ್ಕೆ ಬಿ ರಿಪೋರ್ಟ್ ಹಾಕ್ತಿನಿ ಎಂದು ಕಿರುಕುಳ ನೀಡಿದ್ದಾರೆನ್ನಲಾಗಿದೆ. ಮಾತ್ರವಲ್ಲ ಚೆನ್ನೇಗೌಡ ಮನೆಗೆ ಕೆಲ ಪುಂಡರನ್ನು ನುಗ್ಗಿಸಿ ದಾಂಧಲೆ ನಡೆಸಿದ್ದು, ಈ ವೇಳೆ ಚನ್ನೇಗೌಡ ಇದನ್ನು ವೀಡಿಯೋವನ್ನ ಮಾಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌