ಲೋಕಸಭಾ ಚುನಾವಣೆ : ಈ ಪಕ್ಷದಿಂದ ಐವರಿಗೆ ಟಿಕೆಟ್

Published : Feb 14, 2019, 09:09 AM IST
ಲೋಕಸಭಾ ಚುನಾವಣೆ :  ಈ ಪಕ್ಷದಿಂದ ಐವರಿಗೆ ಟಿಕೆಟ್

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ವಿವಿಧ ಪಕ್ಷಗಳು ಸಕಲ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಇದೇ ವೇಳೆ ರಾಷ್ಟ್ರೀಯ ಲೋಕದಳವು ರಾಜ್ಯದಲ್ಲಿ ಐವರನ್ನು ಕಳಕ್ಕೆ ಇಳಿಸಲು ಸಿದ್ಧವಾಗಿದೆ. 

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕದಳ ಪಕ್ಷದ ಐವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್‌ ಮಥಾಯಿ ಈಪನ್‌ ವೆಟ್ಟತ್‌ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1996ರಲ್ಲಿ ಚೌಧರಿ ಅಜಿತ್‌ ಸಿಂಗ್‌ ಅವರು ರಾಷ್ಟ್ರೀಯ ಲೋಕದಳ ಪಕ್ಷ ಸ್ಥಾಪಿಸಿದರು. ಈ ಪಕ್ಷ ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿದ್ದು, ಕಳೆದ ಮೂರು ತಿಂಗಳ ಹಿಂದೆ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಈಗಾಗಲೇ ಪಕ್ಷದ ಸಂಘಟನೆಯನ್ನು ರಾಜ್ಯಾದ್ಯಂತ ಬಲವಾಗಿ ಸಂಘಟಿಸಲಾಗುತ್ತಿದೆ ಎಂದರು.

ಕರ್ನಾಟಕ ಪ್ರದೇಶ ರಾಷ್ಟ್ರೀಯ ಲೋಕದಳ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಡಿ.ರಮೇಶ್‌ ಗುರುದೇವ್‌, ಪ್ರಧಾನ ಕಾರ್ಯದರ್ಶಿಗಳಾಗಿ ಎಸ್‌.ರವಿಚಂದ್ರನ್‌, ಚಂದ್ರಶೇಖರ್‌, ರಾಜ್ಯ ವಕ್ತಾರರಾಗಿ ವಿಶ್ವನಾಥ್‌, ಸಂಘಟನಾ ಕಾರ್ಯದರ್ಶಿಗಳಾಗಿ ನಿರಂಜನ್‌ ಕುಮಾರ್‌, ಡೇವಿಡಕ್‌, ಕಾರ್ಯದರ್ಶಿಗಳಾಗಿ ಉದಯಕುಮಾರ್‌, ಲಕ್ಷ್ಮೇಕಾಂತ್‌, ಜಗದೀಶ್‌ ಅವರನ್ನು ನೇಮಿಸಲಾಗಿದೆ. ಬೆಂಗಳೂರು ಮತ್ತು ಗ್ರಾಮಾಂತರ, ರಾಮನಗರ, ಮೈಸೂರು, ಕೊಡಗು, ಚಿತ್ರದುರ್ಗ, ರಾಯಚೂರು, ಚಿಕ್ಕಬಳ್ಳಪುರ, ಕೊಪ್ಪಳ, ಯಾದಗಿರಿ, ಹಾಸನ, ಬಿಜಾಪುರಕ್ಕೆ ಜಿಲ್ಲಾಧ್ಯಕ್ಷರು ಹಾಗೂ ನೆಲಮಂಗಲ, ಬೆಂಗಳೂರು ಉತ್ತರಕ್ಕೆ ತಾಲೂಕು ಅಧ್ಯಕ್ಷರನ್ನು ನೇಮಿಸಿ ಪಕ್ಷ ಸಂಘಟಿಸಲಾಗುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ