ಲಾರಿ ಡ್ರೈವರ್ ರೂಪದ ದೇವರನ್ನೊಮ್ಮೆ ನೋಡಿ: ಪ್ರಯಾಣಿಕರ ಜೀವ ಉಳಿಸಿದ್ಹೇಗೆ?

Published : Dec 29, 2018, 08:47 PM ISTUpdated : Dec 29, 2018, 09:08 PM IST
ಲಾರಿ ಡ್ರೈವರ್ ರೂಪದ ದೇವರನ್ನೊಮ್ಮೆ ನೋಡಿ: ಪ್ರಯಾಣಿಕರ ಜೀವ ಉಳಿಸಿದ್ಹೇಗೆ?

ಸಾರಾಂಶ

ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಲಾರಿ ಚಾಲಕನ ಚಾಣಾಕ್ಷತೆಯಿಂದ 70 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದ ಇಳಿಜಾರಿನಲ್ಲಿ ನಡೆದಿದೆ.

ಕಾರವಾರ(ಡಿ.29): ದೇವರು ಎಲ್ಲ ಕಡೆ ಇದ್ದಾನೆ. ಅವಶ್ಯಕತೆ ಬಿದ್ದಾಗ ಬೇರೆ ಬೇರೆ ರೂಪದಲ್ಲಿ ಆತ ಅವತರಿಸುತ್ತಾನೆ ಅಂತಾರೆ. ಈ ಮಾತು ಅಕ್ಷರಶಃ ನಿಜ ನೋಡಿ.

ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಲಾರಿ ಚಾಲಕನ ಚಾಣಾಕ್ಷತೆಯಿಂದ 70 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದ ಇಳಿಜಾರಿನಲ್ಲಿ ನಡೆದಿದೆ.

ಲಾರಿ ಚಾಲಕ ಈರಣ್ಣ ಹಾಗೂ ವಾಯವ್ಯ ಕರ್ನಾಟಕ ಸಾರಿಗೆ ಬಸ್ ಚಾಲಕ ಕತ್ತಿ ಕಾನಾಪುರ್ ತಮ್ಮ ಜೀವದ ಹಂಗನ್ನೇ ತೊರೆದು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ  70 ಜನರ ಪ್ರಾಣ ಕಾಪಾಡಿದ್ದಾರೆ.  ಬ್ರೇಕ್ ಫೇಲ್ ಆಗಿದ್ದ ಬಸ್ಸನ್ನು ಪದೇ ಪದೇ ತನ್ನ ಲಾರಿಗೆ ಗುದ್ದಿಸಿಕೊಂಡು ಪ್ರಯಾಣಿಕರನ್ನು ಅಪಾಯದಿಂದ ರಕ್ಷಿಸಿದ್ದಾರೆ.

ಗದಗದಿಂದ ಕಾರವಾರ ಕಡೆಗೆ ಹೋಗುತ್ತಿದ್ದ ಬಸ್ ಅರಬೈಲ್  ಪ್ರದೇಶದ ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದೆ. ಇದರಿಂದಾಗಿ ಬಸ್  ಕಂದಕಕ್ಕೆ ಬಿದ್ದು  ದೊಡ್ಡ ಅನಾಹುತಾಗುವ ಸಾಧ್ಯತೆ ಹೆಚ್ಚಾಗಿತ್ತು.

ಇಂತಹ ಕಠಿಣ ಸಂದರ್ಭದಲ್ಲಿ ಬಸ್ ಚಾಲಕ ಮುಂದೆ ಚಲಿಸುತ್ತಿದ್ದ ಲಾರಿಗೆ ಎರಡು ಬಾರಿ ಡಿಕ್ಕಿ ಹೊಡೆದಿದ್ದಾನೆ. ಬಸ್ ನ ಬ್ರೇಕ್ ಫೇಲ್ ಆಗಿದೆ ಎಂದು ಅಂದಾಜಿಸಿದ ಲಾರಿ ಚಾಲಕ  ಪದೇ ಪದೇ ಡಿಕ್ಕಿ ಹೊಡೆಸಿಕೊಳ್ಳುತ್ತಲೇ ನಿಧಾನವಾಗಿ ಬಂದಿದ್ದಾನೆ. ನಂತರ ಬಸ್ಸಿನ ವೇಗ ಕಡಿಮೆಯಾಗಿದೆ. ಹೀಗೆ ಸತತ ನಾಲ್ಕು ಕಿಲೋ ಮೀಟರ್ ವರೆಗೂ  ಸಾಗಿದ ನಂತರ ಬಸ್ ನಿಂತಿದೆ.

ಕರ್ತವ್ಯ ನಿಷ್ಠೆ ಹಾಗೂ ಸಮಯ ಪ್ರಜ್ಞೆಯಿಂದಾಗಿ  70 ಜನರ  ಜೀವ ಉಳಿಸಿದ ಚಾಲಕರ  ಕಾರ್ಯದ ಬಗ್ಗೆ  ಎಲ್ಲೆಡೆ ಪ್ರಶಂಸೆಯ ಮಾತುಗಳು ಕೇಳಿ ಬರುತ್ತಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನೀವು ನಮ್ಮ ಯಜಮಾನರಲ್ಲ: ಅಪಾರ್ಟ್‌ಮೆಂಟ್ ನಿವಾಸಿಗೆ ಎಚ್ಚರಿಕೆ ಕೊಟ್ಟ ಡಿಕೆಶಿಗೆ ಮೋಹನ್‌ದಾಸ್ ಪೈ ಖಂಡನೆ
ಟ್ರಾಫಿಕ್ ಸಮಸ್ಯೆ ಮಾತ್ರವಲ್ಲ, ಇಂಗಾಲ ಹೊರಸೂಸುವಿಕೆಯಲ್ಲಿ ಕೂಡ ದೇಶದಲ್ಲೇ ಅಗ್ರ ಸ್ಥಾನ ಪಡೆದ ಬೆಂಗಳೂರು!