BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ

Published : Dec 13, 2025, 10:37 PM IST
Loud Explosion Sound Shakes Ground Near Davanagere Border Villagers Panic

ಸಾರಾಂಶ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ರಾತ್ರಿ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಭಯಭೀತರಾದ ಗ್ರಾಮಸ್ಥರು ಮನೆಯಿಂದ ಹೊರಬಂದಿದ್ದು, ಇದು ವಿಜಯನಗರ ಜಿಲ್ಲೆಯ ಕಡೆಯಿಂದ ಬಂದ ಶಬ್ದವಿರಬಹುದು ಎಂದು ತಹಸೀಲ್ದಾರ್ ಸ್ಪಷ್ಟನೆ ನೀಡಿದ್ದಾರೆ.

ದಾವಣಗೆರೆ (ಡಿ.13): ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಇಂದು ರಾತ್ರಿವೇಳೆ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಗ್ರಾಮಸ್ಥರು ಭಯಭೀತರಾಗಿ ಹೊರಗಡೆ ಓಡಿಬಂದ ಘಟನೆ ನಡೆದಿದೆ.

ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು

ಚಿಕ್ಕಮಲ್ಲನಹೊಳೆ ಗ್ರಾಮವು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳ ಗಡಿಭಾಗದಲ್ಲಿರುವುದರಿಂದ, ಸ್ಫೋಟದ ಸದ್ದಿಗೆ ಗ್ರಾಮದ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.

ಈ ಘಟನೆಯ ಕುರಿತು ಜಗಳೂರು ತಹಸೀಲ್ದಾರ್ ಸಯ್ಯದ್ ಕಲೀಂವುಲ್ಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಕಡೆಯಿಂದ ಸ್ಫೋಟದ ಶಬ್ದದ ಅನುಭವ ಆಗಿರುವ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ.

ಆತಂಕ ಬೇಡ: ಗ್ರಾಮಸ್ಥರಿಗೆ ಧೈರ್ಯ ತುಂಬಿದ ತಹಸೀಲ್ದಾರ್

ಈ ಕುರಿತು ಯಾವುದೇ ಗೊಂದಲ ಬೇಡ ಎಂದು ಹೇಳಿರುವ ತಹಸೀಲ್ದಾರ್ ಸಯ್ಯದ್ ಕಲೀಂವುಲ್ಲಾ ಅವರು, ತಕ್ಷಣವೇ ಸ್ಥಳಕ್ಕೆ ಗ್ರಾಮಲೆಕ್ಕಿಗರನ್ನು ಕಳುಹಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಜಗಳೂರು ತಾಲೂಕಿನ ಜನರು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ