
ಕಲಬುರಗಿ(ಜ.05): ಈ ರೀತಿಯ ಗದ್ದಲ ಗಲಾಟೆ ಯಾರೂ ನಿರೀಕ್ಷಿಸಿರಲಿಲ್ಲ. ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ 14 ದಿನ ಕಳೆದಿತ್ತು. ಹೀಗಾಗಿ ಅವರಾಗಿಯೇ ಕುರ್ಚಿ ಬಿಟ್ಟು ಕೊಡುತ್ತಾರೆ ಎನ್ನುವ ವಿಶ್ವಾಸ ಇತ್ತು ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಗದ್ದಲ ವಿಚಾರ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಕಾನೂನು ಸಚಿವ ಮಾಧುಸ್ವಾಮಿ, ಪರಿಷತ್ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಆದೇಶಿಸಿರುವ ತನಿಖೆ ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ. ಪರಿಷತ್ ಸದಸ್ಯರ ನಡವಳಿಕೆಗಳ ಬಗ್ಗೆ ತನಿಖೆಗೆ ಸಭಾಪತಿ ಆದೇಶ ನೀಡಿಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ಆಪ್ತನನ್ನ ಜೆಡಿಎಸ್ಗೆ ಕರೆತರಲು ಕುಮಾರಸ್ವಾಮಿ ಯತ್ನ..!
ಈ ರೀತಿಯ ಗದ್ದಲ ಗಲಾಟೆ ಯಾರೂ ನಿರೀಕ್ಷಿಸಿರಲಿಲ್ಲ. ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ 14 ದಿನ ಕಳೆದಿತ್ತು. ಹೀಗಾಗಿ ಅವರಾಗಿಯೇ ಕುರ್ಚಿ ಬಿಟ್ಟು ಕೊಡುತ್ತಾರೆ ಎನ್ನುವ ವಿಶ್ವಾಸ ಇತ್ತು. ಬೆಲ್ ನಂತರವೂ ಸಭಾಪತಿ ಬಾರದಿರುವ ಕಾರಣ ಉಪಸಭಾಪತಿಯವರನ್ನು ಕೂರಿಸಲಾಯಿತು. ಇದಾದನಂತರ ಅನಿರೀಕ್ಷಿತ ರೀತಿನಲ್ಲಿ ಗಲಾಟೆ ಗದ್ದಲ ನಡೆಯಿತು ಎಂದು ಹೇಳಿದ್ದಾರೆ.
ವೀಲಿನದ ಹೆಸರಲ್ಲಿ ಜೆಡಿಎಸ್ ಇಬ್ಬಾಗ ಮಾಡಲು ಬಿಜೆಪಿ ತಂತ್ರ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರೇ ವಿಧಾನ ಪರುಷತ್ತಿನಲ್ಲಿ ನಮಗೆ ಬೆಂಬಲಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಾಜ್ಯ ವಿವಿಧ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆ ಯಾವುದೇ ಶಾಸಕರಿಗೂ ಮೊದಲಿನಂತೆ ಬಜೆಟ್ ನೀಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜವಿಲ್ಲ: ಸರ್ಕಾರದ ನಿರ್ಧಾರ ವಿರುದ್ಧ ವಿಶ್ವನಾಥ್ ಆಕ್ರೋಶ
ಎಲ್ಲಾ ಕೆಲಸವು ಸರಿಯಾಗಿ ಆಗಿದೆ ಎಂದು ಆತ್ಮವಿಶ್ವಾಸದಿಂದ ಯಾರು ಹೇಳುವ ಸ್ಥಿತಿಯಲ್ಲಿ ಇಲ್ಲ. ಯತ್ನಾಳ ಅಸಮಾಧಾನದ ಬಗ್ಗೆ ಅವರನ್ನೇ ಕೇಳಿ ಎಂದ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ