ಧಾರವಾಡದಲ್ಲಿ ತೀವ್ರವಾಗಿ ಹಬ್ಬುತ್ತಿದೆ ಮದ್ರಾಸ್‌ ಐ!

Published : Jul 30, 2023, 05:57 AM IST
ಧಾರವಾಡದಲ್ಲಿ ತೀವ್ರವಾಗಿ ಹಬ್ಬುತ್ತಿದೆ ಮದ್ರಾಸ್‌ ಐ!

ಸಾರಾಂಶ

ನಿರಂತರ ಮಳೆ ಹಾಗೂ ತಂಪು ವಾತಾವರಣದಿಂದ ನೆಗಡಿ, ಕೆಮ್ಮು ಹಾಗೂ ಡೆಂಘೀ, ಚಿಕೂನ್‌ಗುನ್ಯಾನಂತಹ ಸಾಂಕ್ರಾಮಿಕ ರೋಗಗಳ ಕಾಟ ಒಂದೆಡೆಯಾದರೆ, ಇತ್ತೀಚೆಗೆ ಹೊಸದಾಗಿ ಮದ್ರಾಸ್‌ ಐ ಎಂಬ ಕಣ್ಣು ನೋವಿನ ಬಾಧೆ ಜಿಲ್ಲೆಯ ಜನತೆಯನ್ನು ತೀವ್ರವಾಗಿ ಕಾಡುತ್ತಿದೆ.

ಬಸವರಾಜ ಹಿರೇಮಠ

 ಧಾರವಾಡ (ಜು.30) :  ನಿರಂತರ ಮಳೆ ಹಾಗೂ ತಂಪು ವಾತಾವರಣದಿಂದ ನೆಗಡಿ, ಕೆಮ್ಮು ಹಾಗೂ ಡೆಂಘೀ, ಚಿಕೂನ್‌ಗುನ್ಯಾನಂತಹ ಸಾಂಕ್ರಾಮಿಕ ರೋಗಗಳ ಕಾಟ ಒಂದೆಡೆಯಾದರೆ, ಇತ್ತೀಚೆಗೆ ಹೊಸದಾಗಿ ಮದ್ರಾಸ್‌ ಐ ಎಂಬ ಕಣ್ಣು ನೋವಿನ ಬಾಧೆ ಜಿಲ್ಲೆಯ ಜನತೆಯನ್ನು ತೀವ್ರವಾಗಿ ಕಾಡುತ್ತಿದೆ.

ಡೆಂಘೀ, ಚಿಕೂನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಸೊಳ್ಳೆಗಳಿಂದ ಬಂದರೆ ಅಡಿನೊ ವೈರಾಣುವಿನಿಂದ ಮದ್ರಾಸ್‌ ಐ(Madras eye virus) ಎಂಬ ರೋಗ ಹರಡುತ್ತಿದೆ. ದಿನದಿಂದ ದಿನಕ್ಕೆ ಧಾರವಾಡ ಜಿಲ್ಲಾದ್ಯಂತ ಹೆಚ್ಚಳವಾಗುತ್ತಿದ್ದು, ಮಕ್ಕಳು ಹಾಗೂ ಯುವ ಜನರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಬ್ಬುತ್ತಿರುವ ಕಾರಣ ಜನರಲ್ಲಿ ಭಯ ಮೂಡಿಸಿದೆ. ಹವಾಮಾನ ವೈಪರೀತ್ಯದಿಂದ ಮತ್ತು ನಿರಂತರ ಮಳೆಯಿಂದಾಗಿ ಈ ರೋಗ ಬರುತ್ತಿದ್ದು, ಮಳೆಗಾಲ ಮುಗಿಯುವ ವರೆಗೂ ವಿಶೇಷವಾಗಿ ಮಕ್ಕಳು ತುಸು ಎಚ್ಚರ ವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಮದ್ರಾಸ್ EYE ಗೆ ನಲುಗಿ ಹೋದ ವಿದ್ಯಾರ್ಥಿಗಳು, ಕೂಲಿಂಗ್ ಗ್ಲಾಸ್ ಧರಿಸಿ ಶಾಲೆಗೆ

ಏನಿದರ ಲಕ್ಷಣ?

ಈ ರೋಗ ಬಂದಾಗ ವ್ಯಕ್ತಿಯ ಎರಡು ಕಣ್ಣುಗಳಲ್ಲಿ ಉರಿ ಬರುತ್ತದೆ. ಊತದ ಸಮಸ್ಯೆ ಕಂಡು ಬರುತ್ತಿದೆ. ಕಣ್ಣಿನ ಬಿಳಿ ಭಾಗ ಕೆಂಪಾಗುವುದು, ಕಣ್ಣುಗಳಿಂದ ನಿರಂತರವಾಗಿ ನೀರು ಬರುವುದು, ಕಣ್ಣಲ್ಲಿ ಪಿಚ್ಚು ಬರುವುದು ಮತ್ತು ಕಣ್ಣು ಊದಿಕೊಳ್ಳುವುದು ಮದ್ರಾಸ್‌ ಐನ ಮುಖ್ಯ ಲಕ್ಷಣಗಳಾಗಿವೆ. ಮದ್ರಾಸ್‌ ಐ ಪೀಡಿತ ಜನರಿಗೆ ನೋವು ನಿವಾರಕ ಮಾತ್ರೆ, ಕಣ್ಣಿನ ಡ್ರಾಫ್ಸ್‌ ನೀಡುವುದು ಮತ್ತು ಕಣ್ಣಿಗೆ ಕೂಲಿಂಗ್‌ ಗ್ಲಾಸ್‌ ಅಥವಾ ಕಪ್ಪು ಕನ್ನಡಕ ಧರಿಸಬೇಕಾಗುತ್ತದೆ. ಆಗಾಗ ಕೈ ತೊಳೆಯುವುದು, ಅನಗತ್ಯವಾಗಿ ಇತರ ವಸ್ತು ಮುಟ್ಟದಿರುವುದು, ಕಣ್ಣು ಒರೆಸಲು ಪ್ರತ್ಯೇಕ ವಸ್ತ್ರ ಅಥವಾ ಮೆತ್ತನೆಯ ಬಟ್ಟೆಬಳಸುವುದು ಹಾಗೂ ಆದಷ್ಟುಜನನಿಬಿಡ ಸ್ಥಳದಿಂದ ದೂರವಿರುವುದು ಉತ್ತಮ. ಕಣ್ಣು ಕೆಂಪಾದಾಗ ಆ್ಯಂಟಿಬಯಾಟಿಕ್‌ ಔಷಧಿ ಬಳಸಬೇಕು. ಕಣ್ಣನ್ನು ಆಗಾಗ ಉಗುರು ಬೆಚ್ಚಗಿನ ನೀರಿನಿಂದ ತೊಳೆಯುವುದು ಮುನ್ನೆಚ್ಚರಿಕೆ ಕ್ರಮಗಳಲ್ಲಿ ಪ್ರಮುಖ.

ಎಚ್ಚರಿಕೆ ಕ್ರಮ ವಹಿಸಿ:

ಮದ್ರಾಸ್‌ ಐ ವೈರಾಣು ಹೆಚ್ಚಾಗಿ 20 ರಿಂದ 35 ವಯೋಮಾನದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಅದರಲ್ಲೂ ವಿಶೇಷವಾಗಿ ಹಾಸ್ಟೆಲ್‌, ಪಿಜಿಗಳಲ್ಲಿ ವಾಸಿಸುವ ಯುವಕ-ಯುವತಿಯರಲ್ಲಿ ಕಂಡು ಬರುತ್ತಿದೆ. ಇಂತಹವರು ವಾಸ ಸ್ಥಳದಲ್ಲಿ ಇತರರೊಂದಿಗೆ ಸುರಕ್ಷಿತ ಅಂತರ, ನೈರ್ಮಲ್ಯ, ಸ್ವಚ್ಛತೆ ಕಾಪಾಡಿಕೊಂಡು, ಆಗಾಗ ಕೈ ತೊಳೆದು ಕೊಳ್ಳಬೇಕು.

ಈ ರೋಗಬಾಧೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅಬಾಲವೃದ್ಧರಾದಿಯಾಗಿ ಎಲ್ಲ ವಯಸ್ಸಿನ, ಎಲ್ಲ ರೋಗದ ಜನರು ರೋಗದ ಭಯಕ್ಕೆ ಜಿಲ್ಲಾಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೋಗ ಪರಸ್ಪರ ಹರಡದಂತೆ ಮುನ್ನೆಚರಿಕೆಯಾಗಿ ಜಿಲ್ಲಾಸ್ಪತ್ರೆ ಮಾದರಿಯಾಗುವ ಕ್ರಮ ವಹಿಸಿದೆ ಎಂದು ಕನ್ನಡಪ್ರಭಕ್ಕೆ ಮಾಹಿತಿ ನೀಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಆಸ್ಪತ್ರೆಯ ಮುಖ್ಯ ಕಟ್ಟಡದಲ್ಲಿ ಕಣ್ಣಿನ ಚಿಕಿತ್ಸಾ ವಿಭಾಗದಲ್ಲಿ ಮದ್ರಾಸ್‌ ಐ ರೋಗ ಪೀಡಿತರ ಚಿಕಿತ್ಸೆಗಾಗಿ ಪ್ರತ್ಯೇಕ ಸಿಬ್ಬಂದಿ ಹಾಗೂ ಕೊಠಡಿ ವ್ಯವಸ್ಥೆ ಮಾಡಿದೆ. ಸರ್ಕಾರಿ ಆಸ್ಪತ್ರೆಗೆ ಮುಖ್ಯವಾಗಿ ಗ್ರಾಮೀಣ ಜನರು, ಆರ್ಥಿಕವಾಗಿ ಹಿಂದುಳಿದವರು, ಗರ್ಭಿಣಿಯರು, ಸಣ್ಣ ಮಕ್ಕಳು, ಇತರ ರೋಗಿಗಳು ಚಿಕಿತ್ಸೆಗಾಗಿ ದಿನ ನಿತ್ಯ ಆಗಮಿಸುತ್ತಾರೆ. ಅವರಿಗೆ ಮದ್ರಾಸ್‌ ಐ ಕಾಣಿಸಿಕೊಂಡವರಿಂದ ಸಮಸ್ಯೆ ಆಗಬಾರದು. ಅದಕ್ಕಾಗಿ ಮದ್ರಾಸ್‌ ಐ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಆಗಮಿಸುವವರಿಗೆ ಪ್ರತ್ಯೇಕವಾಗಿ ನೋಂದಣಿ ಕೌಂಟರ್‌, ದಾಖಲಾತಿ ಕೇಂದ್ರ ಹಾಗೂ ಚಿಕಿತ್ಸಾ ಕೊಠಡಿ ಮಾಡಲಾಗಿದೆ ಎಂದು ತಿಳಿಸಿದರು.

ನಿತ್ಯ 60-80 ಜನರಿಗೆ ಚಿಕಿತ್ಸೆ:

ರಜಾ ದಿನಗಳಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಹಾಗೂ ಉಳಿದಂತೆ ಎಲ್ಲ ದಿನಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 4.30ರ ವರೆಗೆ ಚಿಕಿತ್ಸೆಗೆ ಲಭ್ಯವಿರುತ್ತಾರೆ. ಚಿಕಿತ್ಸೆ ನಂತರ ಅಲ್ಲಿಯೇ ಅಗತ್ಯ ಔಷಧಿ ನೀಡಲು ವ್ಯವಸ್ಥೆ ಮಾಡಲಾಗಿದೆ. ಕಳೆದ ಜುಲೈ 24ರ ಸೋಮವಾರದಿಂದ ಜಿಲ್ಲಾಸ್ಪತ್ರೆಯಲ್ಲಿ ಮದ್ರಾಸ್‌ ಐ ಚಿಕಿತ್ಸೆಗೆ ಪ್ರತ್ಯೇಕವಾಗಿ ಕ್ರಮವಹಿಸಿದ್ದು, ಪ್ರತಿದಿನ ಸರಿಸುಮಾರು 60 ರಿಂದ 80 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಆರು ದಿನಗಳಲ್ಲಿ 240ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಡಾ. ಗಾಬಿ ಮಾಹಿತಿ ನೀಡಿದರು.

ಕಣ್ಣಿನ ಸೋಂಕಿಗೆ ಮನೆ ಮದ್ದು: ಅನಾರೋಗ್ಯಕ್ಕೆ ಹೇಳಿ ಗುಡ್ ಬೈ

ಸಲಹೆ ಪಾಲಿಸಿ:

ಮದ್ರಾಸ್‌ ಐ ವೈರಾಣು ರೋಗವಾಗಿದ್ದು, ಇದು ಗಾಳಿ ಮೂಲಕ ಹರಡುವದಿಲ್ಲ. ಸ್ವಚ್ಛತೆ ಮತ್ತು ವೈದ್ಯರ ಸಲಹೆಗಳನ್ನು ಪಾಲಿಸಿದರೆ, ರೋಗ ನಿರೋಧಕ ಶಕ್ತಿ ಅನುಗುಣವಾಗಿ 3ರಿಂದ 6 ದಿನಗಳಲ್ಲಿ ಕಡಿಮೆ ಆಗುತ್ತದೆ. ನಿರ್ಲಕ್ಷ್ಯ ಮಾಡಿದರೆ ಕಣ್ಣಿನ ದೃಷ್ಟಿಗೆ ತೊಂದರೆ ಆಗಬಹುದು. ಮುಂಜಾಗ್ರತೆ ವಹಿಸಿ ನಿಮ್ಮ ಆರೋಗ್ಯದೊಂದಿಗೆ ಇತರರ ಆರೋಗ್ಯವನ್ನು ರಕ್ಷಿಸಲು ವೈದ್ಯರು ಸಲಹೆ ನೀಡುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ