
ಬೆಂಗಳೂರು (ಜ.17): ಮಾಗಡಿ ರಸ್ತೆಯಿಂದ ಮಾಲಗಾಳಕ್ಕೆ ಹೋಗುವ ದಾರಿಯಲ್ಲಿರುವ ಕೊಟ್ಟಿಗೆಪಾಳ್ಯದಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದೆ. ರಸ್ತೆ ಬದಿಯಲ್ಲಿದ್ದ ಕಸದ ರಾಶಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅದು ಕ್ಷಣಾರ್ಧದಲ್ಲಿ ಪಕ್ಕದಲ್ಲೇ ಇದ್ದ ನೀಲಗಿರಿ ತೋಪಿಗೆ ವ್ಯಾಪಿಸಿದೆ. ಒಣಗಿದ ಎಲೆಗಳು ಮತ್ತು ಮರಗಳಿದ್ದ ಕಾರಣ ಬೆಂಕಿ ಅತಿ ವೇಗವಾಗಿ ಹಬ್ಬಿತು.
ಗಾಳಿಯ ತೀವ್ರತೆಗೆ ಬೆಂಕಿಯ ಜ್ವಾಲೆ ವ್ಯಾಪಿಸಿತು. ಕಸದ ರಾಶಿಯಿಂದ ಶುರುವಾದ ಬೆಂಕಿ ಇಡೀ ನೀಲಗಿರಿ ತೋಪನ್ನು ಆವರಿಸಿತು. ಮರಗಳು ಬೆಂಕಿಗೆ ಆಹುತಿಯಾಗುತ್ತಿರುವುದನ್ನು ಕಂಡು ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾದರು.
ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಬೆಂಕಿ ನಂದಿಸುವ ಕಾರ್ಯಕ್ಕೆ ಕೈಹಾಕಿದರು. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡುವ ಜೊತೆಜೊತೆಗೇ ಲಭ್ಯವಿದ್ದ ನೀರು ಮತ್ತು ಮರಳನ್ನು ಬಳಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕೊಟ್ಟಿಗೆಪಾಳ್ಯದ ಜನರ ಸತತ ಪರಿಶ್ರಮದ ಫಲವಾಗಿ ಬೆಂಕಿ ನಿಯಂತ್ರಣಕ್ಕೆ ಬಂದು ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ