ಮಹದಾಯಿ ವಿವಾದ: ಗೋವಾದಿಂದ ಮತ್ತೆ ಶುರುವಾಯ್ತು ಕಿರಿಕ್

Published : Oct 06, 2020, 05:42 PM IST
ಮಹದಾಯಿ ವಿವಾದ: ಗೋವಾದಿಂದ ಮತ್ತೆ ಶುರುವಾಯ್ತು ಕಿರಿಕ್

ಸಾರಾಂಶ

ಮಹದಾಯಿ ನದಿಯ ನೀರನ್ನು ಹಂಚಿಕೊಳ್ಳುವ ವಿವಾದ ಎರಡೂರಾಜ್ಯಗಳ ನಡುವೆ ಸಾಕಷ್ಟು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಇದೀಗ ಗೋವಾದಿಂದ ಮತ್ತೆ ಕಿರಿಕ್ ಶುರುವಾಗಿದೆ.  

ಬೆಂಗಳೂರು, (ಅ.06): ಕರ್ನಾಟಕವು ಮಹದಾಯಿ ನದಿ ನೀರನ್ನು ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ ಎಂದು ಆರೋಪದ ಮೇಲೆ ಗೋವಾ ಸರ್ಕಾರ ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ. 

ಇದನ್ನು ಸ್ವತಃ  ಗೋವಾ ಸಿಎಂ ಪ್ರಮೋದ್ ಸಾವಂತ್ ಇಂದು (ಮಂಗಳವಾರ) ಹೇಳಿದ್ದು, ಅನುಮತಿಯಿಲ್ಲದೆ ನದಿ ನೀರನ್ನು ಬೇರೆಡೆಗೆ ತಿರುಗಿಸಲು ಕರ್ನಾಟಕ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಗೋವಾ ಆರೋಪಿಸಿದೆ.

ಮಹದಾಯಿ,ಭೀಮಾ, ಕಳಸಾ, ಬಂಡೂರಿ; ಸಂಪುಟ ಸಭೆಯಲ್ಲಿ ರಾಜ್ಯದ ನೀರಾವರಿಗೆ ಬಂಪರ್ ಗಿಫ್ಟ್! 

ಮಹದಾಯಿ ವಿವಾದ ಕೋರ್ಟ್‌ನಲ್ಲಿದ್ದರೂ ನದಿ ನೀರು ಹರಿಯುವ ದಿಕ್ಕು ಬದಲಿಸಲು ಕರ್ನಾಟಕ ಯತ್ನಿಸುತ್ತಿದೆ ಎಂದು ಆ ರಾಜ್ಯದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಸಲ್ಲಿಸಲಾಗಿದೆ' ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ನದಿ ನೀರು ಹರಿಯುವ ತಿರುವು ಬದಲಿಸಲು ಕರ್ನಾಟಕ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ ಎಂಬುದು ಗೋವಾ ಸರ್ಕಾರದ ಆರೋಪ. ನಿಂದನೆ ಅರ್ಜಿ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಾವಂತ್, ಮಹದಾಯಿ ವಿಷಯದಲ್ಲಿ ರಾಜ್ಯದ ಹಕ್ಕು ರಕ್ಷಿಸಲು ನಿರಂತರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ