ಮೈಸೂರು(ಏ.04): ಮೈಸೂರಿನಲ್ಲಿ ಯುಗಾದಿಯ ಮುನ್ನಾದಿನ ಉತ್ತರಾದಿ ಮಠದಲ್ಲಿ ನಡೆದ ಸಮಾರಂಭವೊಂದರಲ್ಲಿ ಶ್ರೀ ಸತ್ಯಾತ್ಮತೀರ್ಥರಿಗೆ ಸಮಾನವಾಗಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಒಪ್ಪದೆ ನೆಲದ ಮೇಲೆ ಕುಳಿತ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಡವಳಿಕೆ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.
ಹೌದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗುರುವಿಗೆ ಸಮಾನವಾಗಿ ಕುರ್ಚಿಯಲು ಕುಳಿತುಕೊಳ್ಳಲು ಒಪ್ಪದೇ ಕೆಳಗೆ ಕುಳಿತುಕೊಳ್ಳುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಯುಗಾದಿ ಹಬ್ಬದ ಹಿಂದಿನ ದಿನ ಮೈಸೂರಿನ ಅಗ್ರಹಾರದಲ್ಲಿರುವ ಉತ್ತರಾದಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರ ಜೊತೆ ಯದುವೀರ ಭಾಗಿಯಾಗಿದ್ದರು. ವೇದಿಕೆಯಲ್ಲಿ ಶ್ರೀಗಳ ಪಕ್ಕದಲ್ಲೇ ಯದುವೀರ ಅವರಿಗೆ ಆಸನ ನೀಡಲಾಗಿತ್ತು. ಆದರೆ, ಅಲ್ಲಿ ಕುಳಿತುಕೊಳ್ಳದೆ ಪದ್ಮಾಸನ ಹಾಕಿಕೊಂಡು ಕೆಳಗೆ ಕುಳಿತರು. ಇದು ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನು ಈ ಬಗ್ಗೆ ಫೇಸ್ಬುಕ್ ಪೋಸ್ಟ್ ಮಾಡಿರುವ ಯದುವೀರ್ 'ಮೈಸೂರಿನ ಶ್ರೀಮದುತ್ತರಾದಿ ಮಠದಲ್ಲಿ ನಡೆದ ಶ್ರೀ ಶ್ರೀ 1008 ಶ್ರೀ ಸತ್ಯಸಂತುಷ್ಟ ತೀರ್ಥರ ಆರಾಧನಾ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಎಲ್ಲರಿಗೂ ಒಳ್ಳೆಯ ಆರೋಗ್ಯ, ಐಶ್ವರ್ಯ ಅಭಿವೃದ್ಧಿಯಾಗಲೆಂದು ಶ್ರೀ ಸ್ವಾಮಿಗಳವರಲ್ಲಿ ಪ್ರಾರ್ಥಿಸಲಾಯಿತು' ಎಂದಿದ್ದಾರೆ,
'
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ