
ಮುಂಬೈ(ಜೂ.06): ಮಹಾರಾಷ್ಟ್ರದ ವರ್ಧಾ ಜಿಲ್ಲೆಯ ಬ್ಯಾಂಕ್ ಶಾಖೆಯಲ್ಲಿ ಮುಸುಕುಧಾರಿಯೊಬ್ಬ ಇಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವುದು ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಬ್ಯಾಂಕ್ನೊಳಗೆ ನುಗ್ಗಿದ ಈ ಮುಸುಕುಧಾರಿ ಸಿಬ್ಬಂದಿಗೆ ಮುಂದಿನ 15 ನಿಮಿಷದಲ್ಲಿ 55 ಲಕ್ಷ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದ್ದೆನ್ನಲಾಗಿದೆ. ಇನ್ನು ಈ ಮುಸುಕುಧಾರಿ ನೀಡಿದ ಪತ್ರದಲ್ಲಿ 'ತಾನು ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ತಗುಲಿದ ಬಿಲ್ ಪಾವತಿಸಲು ಹಣವಿಲ್ಲ. ಹೀಗಾಗಿ ಈ ಹಣಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ಬರೆದಿದ್ದ' ಎಂದು ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.
ಇನ್ನು ಬಾಂಬ್ ಸ್ಪೋಟಿಸಿದರೆ ತಾನು ಕಳೆದುಕೊಳ್ಳುವುದು ಏನೂ ಇಲ್ಲ ಎಂದು ಮುಸುಕುಧಾರಿ ಬೆದರಿಕೆ ಹಾಕಿದ್ದಾನೆ ಎಂದೂ ಹೇಳಲಾಗಿದೆ. ಇನ್ನು ಪೊಲೀಸ್ ಠಾಣೆ ಬ್ಯಾಂಕ್ ಎದುರಿಗಿದ್ದ ಕಾರಣ, ಮುಸುಕುಧಾರಿ ಇಂತಹುದ್ದೊಂದು ಬೆದರಿಕೆ ಹಾಕಿದ ಬೆನ್ನಲ್ಲೇ ಸಿಬ್ಬಂದಿ ಪೊಲೀಸರನ್ನು ಅಲರ್ಟ್ ಮಾಡಿದ್ದಾರೆ.
ಇನ್ನು ಈ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಈತನ ಕೈಯ್ಯಲ್ಲಿದ್ದ ನಕಲಿ ಬಾಂಬ್ ಕೂಡಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಆತನ ಬಳಿ ಇದ್ದ ಚಾಕೂ ಹಾಗೂ ಏರ್ ಪಿಸ್ತೂಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ