ಪರಿಷತ್‌ ಚುನಾವಣೆ, ವೀರಶೈವ ಲಿಂಗಾಯತರಿಗೆ ಟಿಕೆಟ್‌: ಮಹಾಸಭಾ ಆಗ್ರಹ

Published : Jun 05, 2020, 08:29 AM ISTUpdated : Jun 05, 2020, 08:30 AM IST
ಪರಿಷತ್‌ ಚುನಾವಣೆ, ವೀರಶೈವ ಲಿಂಗಾಯತರಿಗೆ ಟಿಕೆಟ್‌: ಮಹಾಸಭಾ ಆಗ್ರಹ

ಸಾರಾಂಶ

ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದ ಮಹಾಸಭಾದ ಕಾರ್ಯದರ್ಶಿ ಎಚ್‌.ಎಂ.ರೇಣುಕಾ ಪ್ರಸನ್ನ| ವೀರಶೈವ ಲಿಂಗಾಯತ ಸಮಾಜಕ್ಕೆ ರಾಜ್ಯಸಭಾ ಮತ್ತು ಪರಿಷತ್‌ ಚುನಾವಣೆಯಲ್ಲಿ ಆದ್ಯತೆ ನೀಡಬೇಕು|

ಬೆಂಗಳೂರು(ಜೂ.05): ರಾಜ್ಯಸಭಾ ಮತ್ತು ವಿಧಾನ ಪರಿಷತ್‌ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮಾಜದವರಿಗೆ ಪ್ರಾತಿನಿಧ್ಯ ನೀಡುವಂತೆ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಅಧ್ಯಕ್ಷರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.

ಗುರುವಾರ ಈ ಬಗ್ಗೆ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಮಹಾಸಭಾದ ಕಾರ್ಯದರ್ಶಿ ಎಚ್‌.ಎಂ.ರೇಣುಕಾ ಪ್ರಸನ್ನ ಅವರು, ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.25ರಷ್ಟುಮಂದಿ ವೀರಶೈವ-ಲಿಂಗಾಯತ ಸಮಾಜದವರಿದ್ದಾರೆ. ಶಾಸನ ಸಭೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸ್ಥಾನ ದೊರೆತಿಲ್ಲ. ಹಾಗಾಗಿ ವೀರಶೈವ ಲಿಂಗಾಯತ ಸಮಾಜಕ್ಕೆ ರಾಜ್ಯಸಭಾ ಮತ್ತು ವಿಧಾನಪರಿಷತ್‌ ಚುನಾವಣೆಯಲ್ಲಿ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

'ನನ್ನನ್ನು ಬಿಜೆಪಿಯವರು ಸೋಲಿಸಿದ್ದಾರೆ ಅಂತ ನಾನು ಎಲ್ಲೂ ಹೇಳಿಲ್ಲ'

ಅಖಿಲ ಭಾರತ ವೀರಶೈವ ಮಹಾಸಭಾ ಸಂಘಟನೆ ರಾಜಕೀಯ ಚಟುವಟಿಕೆಯಲ್ಲಿ ನೇರವಾಗಿ ಪಾಲ್ಗೊಳ್ಳದಿದ್ದರು ಕೂಡ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬುದಕ್ಕೆ ಈ ಹಿಂದಿನ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳ ಫಲಿತಾಂಶವೇ ಸಾಕ್ಷಿ. ಆದ್ದರಿಂದ ಪ್ರಸ್ತುತ ನಡೆಯಲಿರುವ ರಾಜ್ಯಸಭಾ ಮತ್ತು ವಿಧಾನ ಪರಿಷತ್‌ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮಾಜದವರಿಗೆ ರಾಜ್ಯದ ಮೂರು ಪ್ರಮುಖ ಪಕ್ಷಗಳಲ್ಲಿಯೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹಜ್ ಯಾತ್ರಿಕರು ಸೆ. 15ರೊಳಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯ; ಇಲ್ಲಿದೆ ಸಂಪೂರ್ಣ ವಿವರ
ಕಾಲಿಗೆ ಚಿಪ್‌ ಅಳವಡಿಸಿ ಪೊಲೀಸ್‌ ಪೇದೆ ಹುದ್ದೆಗಳ ದೈಹಿಕ ಪರೀಕ್ಷೆಗೆ ಸಿದ್ಧತೆ, ಓಟ ಮುಗಿಸ್ತಿದ್ದಂತೆ ಮೊಬೈಲ್‌ಗೆ ಬರಲಿದೆ ರಿಸಲ್ಟ್‌