
ಚಿಕ್ಕೋಡಿ (ಜು.15) : ಟೊಮೆಟೋ ಬೆಳೆಗೆ ಈಗ ಬಂಗಾರದ ಬೆಲೆ ಬಂದಿದೆ. ಎಲ್ಲೆಡೆ ಟೊಮೆಟೋಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದನ್ನೇ ಅವಕಾಶವಾಗಿ ಬಳಸಿಕೊಂಡ ಕೆಲವೇ ರೈತರು ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಯುವ ರೈತ ಮಹೇಶ ಹಿರೇಮಠ ಟೊಮೆಟೋ ಕೃಷಿ ಮಾಡಿ ಇಂತಹ ಅಭೂತಪೂರ್ವ ಸಾಧನೆ ಮಾಡಿದ್ದಾನೆ. 20 ಗುಂಟೆಯಲ್ಲಿ ಟೊಮೆಟೊ ಬೆಳೆದು 11 ಲಕ್ಷ ರೂಪಾಯಿ ಆದಾಯ ಗಳಿಸುವ ಮೂಲಕ ಜಮೀನು ಇದ್ದರೂ ಕೆಲಸ ಇಲ್ಲ ಅನ್ನೋ ನಿರುದ್ಯೋಗಿಗಳಿಗೆ ಮಾದರಿಯಾಗಿದ್ದಾನೆ.
ಕೋಲಾರ: ಟೊಮೆಟೋ ಕಳ್ಳತನ ತಪ್ಪಿಸಲು ಹೊಲದಲ್ಲೇ ಟೆಂಟ್ ಹಾಕಿದ ರೈತರು..!
ಬಿಎ ಪದವೀಧರ ಆಗಿರುವ ಯುವ ರೈತ ಮಹೇಶ್ ಹಿರೇಮಠ ಮಾರ್ಚ್ ತಿಂಗಳಲ್ಲಿ 20 ಗುಂಟೆ ಹೊಲದಲ್ಲಿ 3700 ಟೊಮ್ಯಾಟೊ ಸಸಿ ನಾಟಿ ಮಾಡಿದ್ದ. ಒಟ್ಟು ಎರಡು ಲಕ್ಷ ರೂ. ಖರ್ಚು ಮಾಡಿ ವೈಜ್ಞಾನಿಕ ಕೃಷಿ, ಹನಿ ನೀರಾವರಿ ಮೂಲಕ ಟೊಮ್ಯಾಟೊ ಬೆಳೆದಿರುವ ರೈತ. ಕಳೆದ 45 ದಿನಗಳಿಂದ ಟೊಮ್ಯಾಟೊ ಕೋಯ್ಲು ಆರಂಭಿಸಿದ್ದ. ಫಸಲು ಬರುತ್ತಿದ್ದಂತೆ ಟೊಮೆಟೊಗೆ ಬಂಗಾರದ ಬೆಲೆ ಬಂದಿದೆ. ಸಂಕೇಶ್ವರ ಎಪಿಎಂಸಿಗೆ ಟೊಮ್ಯಾಟೊ ಸರಬರಾಜು ಮಾಡಿದ್ದಾನೆ. ಕೇವಲ 45 ದಿನಗಳಲ್ಲಿ 20 ಟನ್ 400 ಕೆಜಿಯಷ್ಟು ಟೊಮ್ಯಾಟೊ ಇಳುವರಿಯಿಂದ ಬರೋಬ್ಬರಿ 9 ಲಕ್ಷರೂ ಆದಾಯ ಗಳಿಸಿರುವ ಯುವ ರೈತ ಮಹೇಶ ಹಿರೇಮಠ ಇತರರಿಗೆ ಮಾದರಿಯಾಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ