
ಕಾರವಾರ : ಮಲ್ಪೆಯಿಂದ ನಾಪತ್ತೆಯಾಗಿದ್ದ ಮೀನುಗಾರರ ಬೋಟಿನ ಅವಶೇಷ ಮಹಾರಾಷ್ಟ್ರ ರಾಜ್ಯದ ಕಡಲ ತೀರದಲ್ಲಿ ಪತ್ತೆಯಾಗಿದೆ.
ಮಹಾರಾಷ್ಟ್ರದ ರತ್ನಗಿರಿ ಬಳಿಯಲ್ಲಿ ಬೋಟಿನ ಅವಶೇಷಗಳು ಕಂಡು ಬಂದಿದ್ದು, ಮಲ್ಪೆಯಿಂದ ಕಾಣೆಯಾದ ಸುವರ್ಣ ತ್ರಿಭುಜ ಬೋಟಿನದ್ದೇ ಎನ್ನಲಾಗುತ್ತಿದೆ.
ಅಂಕೋಲಾ ತಾಲೂಕಿನ ಬೇಲೆಕೇರಿ ಮೂಲದ ಮೀನುಗಾರರಿಗೆ ಈ ಬೋಟಿನ ಅವಶೇಷಗಳು ಕಂಡು ಬಂದಿದೆ. ರತ್ನಗಿರಿ ಬಳಿ ಮೀನುಗಾರಿಕೆಗೆ ತೆರಳಿದ್ದಾಗ ಬೋಟಿನ ಭಾಗಗಳನ್ನು ಮೀನುಗಾರರು ಗಮನಿಸಿದ್ದು, ಕರಾವಳಿ ಕಾವಲು ಪಡೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೀನುಗಾರನಿಂದ ಸಂಪೂರ್ಣ ಮಾಹಿತಿ ಪಡೆದಿರುವ ರಾಜ್ಯದ ಕರಾವಳಿ ಕಾವಲು ಪಡೆ ಪೊಲೀಸರು, ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಿದ್ದಾರೆ.
ಡಿಸೆಂಬರ್ 13 ರಂದು ಮಲ್ಪೆಯಿಂದ ರತ್ನಗಿರಿಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿತ್ತು. ಬೋಟಿನಲ್ಲಿದ್ದ ರಾಜ್ಯದ 7 ಮೀನುಗಾರರು ಈ ವೇಳೆ ನಾಪತ್ತೆಯಾಗಿದ್ದರು. ಆದರೆ ಅಂದಿನಿಂದ ಇಂದಿನವರೆಗೂ ಕೂಡ ಮೀನುಗಾರರಾಗಲಿ ಬೋಟ್ ಆಗಲಿ ಪತ್ತೆಯಾಗಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ