ಪ್ರೀವೆಡ್ಡಿಂಗ್‌ ಶೂಟ್‌ಗಾಗಿ ವಿಧಾನಸೌಧ ಮೇಲೆ ಡ್ರೋನ್‌ ಹಾರಿಸಿದ ಆಸಾಮಿ ಬಂಧನ

Published : Oct 27, 2024, 08:29 AM IST
ಪ್ರೀವೆಡ್ಡಿಂಗ್‌ ಶೂಟ್‌ಗಾಗಿ ವಿಧಾನಸೌಧ ಮೇಲೆ ಡ್ರೋನ್‌ ಹಾರಿಸಿದ ಆಸಾಮಿ ಬಂಧನ

ಸಾರಾಂಶ

ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್‌ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು (ಅ.27) : ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್‌ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್‌ (33) ಬಂಧಿತ. ಆರೋಪಿಯಿಂದ ಡ್ರೋನ್‌ ಕ್ಯಾಮೆರಾ ಹಾಗೂ ರಿಮೋಟ್‌ ಜಪ್ತಿ ಮಾಡಲಾಗಿದೆ. ವಿಧಾನಸೌಧ ಪೊಲೀಸ್‌ ಠಾಣೆ ಹೆಡ್ ಕಾನ್ಸ್‌ಟೇಬಲ್‌ ಎಚ್‌.ಎನ್‌.ಶಿವಕುಮಾರ್‌ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಹೆಡ್‌ ಕಾನ್ಸ್‌ಟೇಬಲ್‌ ಶಿವಕುಮಾರ್‌ ಅವರು ಶುಕ್ರವಾರ ಬೆಳಗ್ಗೆ ಸುಮಾರು 7.30ಕ್ಕೆ ಗಸ್ತು ಕರ್ತವ್ಯದಲ್ಲಿದ್ದರು. ವಿಧಾನಸೌಧದ ಪೂರ್ವ ದ್ವಾರದ ಬಳಿ ಬರುವಾಗ, ಕಟ್ಟಡದ ಮೇಲಿಂದ ಶಬ್ಧ ಕೇಳಿ ಬಂದಿದೆ, ತಕ್ಷಣ ಮುಂದೆ ಹೋಗಿ ನೋಡಿದಾಗ ವಿಧಾನಸೌಧ ಕಟ್ಟಡದ ಮೇಲೆ ಚಿಕ್ಕ ಡ್ರೋನ್‌ ಹಾರಾಡುತ್ತಿರುವುದು ಕಂಡು ಬಂದಿದೆ.

ವಿಡಿಯೋ ಮುಂದಿಟ್ಟು ಮಾಲೀಕಯ್ಯ ಗುತ್ತೇದಾ‌ರ್‌ಗೆ ಮಹಿಳೆಯಿಂದ ಬ್ಲ್ಯಾಕ್‌ಮೇಲ್: 20 ಲಕ್ಷಕ್ಕೆ ಬೇಡಿಕೆ

ಕೊಂಚ ಮುಂದೆ ತೆರಳಿ ಸುತ್ತಮುತ್ತ ಪರಿಶೀಲಿಸಿದಾಗ ಅಂಬೇಡ್ಕರ್‌ ವೀದಿಯ ಹೈಕೋರ್ಟ್‌ ಕಡೆ ಇರುವ ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ಅಪರಿಚಿತ ವ್ಯಕ್ತಿ ಕೈಯಲ್ಲಿ ರಿಮೋಟ್‌ ಹಿಡಿದುಕೊಂಡು ಡ್ರೋನ್‌ ಹಾರಾಟ ನಡೆಸುತ್ತಿರುವುದು ಕಂಡು ಬಂದಿದೆ. ಬಳಿಕ ಆತನನ್ನು ವಶಕ್ಕೆ ಪಡೆದು ಡ್ರೋನ್‌ ಕೆಳಗೆ ಇಳಿಸಿ, ಡ್ರೋನ್‌ ಹಾಗೂ ರಿಮೋಟ್‌ ಜಪ್ತಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಹೊಯ್ಸಳ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಸುಭಾಶ್ಚಂದ್ರ ಅವರ ವಶಕ್ಕೆ ಒಪ್ಪಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿ ವಿನಯ್‌, ಪ್ರೀ ವೆಡ್ಡಿಂಗ್‌ ಪ್ರಯುಕ್ತ ತುಮಕೂರಿನಿಂದ ಬೆಂಗಳೂರಿಗೆ ಬಂದು ಡ್ರೋನ್‌ ಕ್ಯಾಮರಾದಲ್ಲಿ ವಿಧಾನಸೌಧ ಕಟ್ಟಡದ ವಿಡಿಯೋ ಸೆರೆ ಹಿಡಿಯುತ್ತಿದ್ದಾಗಿ ಹೇಳಿಕೆ ನೀಡಿದ್ದಾನೆ. ಈ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ