ಕಲಬುರಗಿ: ಪೊಲೀಸ್ ಪಿಸ್ತೂಲ್ ಕಸಿದು ಆಟವಾಡಿಸಿದ ಕುಖ್ಯಾತ ಕಳ್ಳ ಖಾಜಪ್ಪ!

Published : Jul 18, 2023, 06:51 AM IST
ಕಲಬುರಗಿ: ಪೊಲೀಸ್ ಪಿಸ್ತೂಲ್ ಕಸಿದು ಆಟವಾಡಿಸಿದ ಕುಖ್ಯಾತ ಕಳ್ಳ ಖಾಜಪ್ಪ!

ಸಾರಾಂಶ

ಕಲಬುರಗಿ ಜಿಲ್ಲೆಯಲ್ಲಿ ಅಕ್ಷರಶಃ ಪೊಲೀಸರು ಮತ್ತು ಕಳ್ಳನ ನಡುವೆ, ಕಳ್ಳ ಪೊಲೀಸ್‌ ಆಟ ನಡೆದಿದೆ. ಕೊನೆಗೂ ಕಲಬುರಗಿ ಪೊಲೀಸರು ಆಟದಲ್ಲಿ ಗೆದ್ದಿದ್ದು, ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮೂರು ರಾಜ್ಯದ ಪೊಲೀಸರಿಗೆ ಬೇಕಾಗಿದ್ದ ಖತರ್ನಾಕ ಮನೆಗಳ್ಳನನ್ನು ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ.

ಕಲಬುರಗಿ (ಜು.18) :  ನೀವೆಲ್ಲಾ ಕಳ್ಳ ಮತ್ತು ಪೊಲೀಸ ಆಟ ಅಂತ ಕೇಳಿರ್ತೀರಿ, ಸಿನಿಮಾದಲ್ಲಿ ನೋಡಿರ್ತೀರಿ. ಆದರೆ, ಕಲಬುರಗಿ ಜಿಲ್ಲೆಯಲ್ಲಿ ಇಂದು ನಿಜವಾಗಿಯೂ ಕಳ್ಳ ಪೊಲೀಸ್‌ ಆಟವೊಂದು ನಡೆದಿದೆ. ಕುಖ್ಯಾತ ಕಳ್ಳನೋರ್ವನನ್ನು ಪೊಲೀಸರು ಹಿಡಿಯಲು ಹೋಗಿದ್ದರು. ಆದರೆ ಕಳ್ಳ ಪಿಎಸ್‌ಐ ಅವರ ಸರ್ವಿಸ್‌ ಪಿಸ್ತೂಲ್‌ ಸಮೇತ ಪರಾರಿಯಾಗಿ ಪೊಲೀಸರಿಗೆ ಆಟವಾಡಿಸಿದ್ದ. ಕೊನೆಗೆ ಎಂಟುವರೆ ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಆರೋಪಿ ಶರಣಾಗಿದ್ದಾನೆ.

ಕಲಬುರಗಿಯಲ್ಲಿ ಕಳ್ಳ ಪೊಲೀಸ್‌ ಆಟ:

ಹೌದು ಇಂದು ಕಲಬುರಗಿ ಜಿಲ್ಲೆಯಲ್ಲಿ ಅಕ್ಷರಶಃ ಪೊಲೀಸರು ಮತ್ತು ಕಳ್ಳನ ನಡುವೆ, ಕಳ್ಳ ಪೊಲೀಸ್‌ ಆಟ ನಡೆದಿದೆ. ಕೊನೆಗೂ ಕಲಬುರಗಿ ಪೊಲೀಸರು ಆಟದಲ್ಲಿ ಗೆದ್ದಿದ್ದು, ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮೂರು ರಾಜ್ಯದ ಪೊಲೀಸರಿಗೆ ಬೇಕಾಗಿದ್ದ ಖತರ್ನಾಕ ಮನೆಗಳ್ಳನನ್ನು ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ.

ಅಫಜಲ್ಪುರ: ಮದುವೆ ಸಂಭ್ರಮದಲ್ಲಿದ್ದಾಗಲೇ ಮನೆಗೆ ಕನ್ನ..!

ಮೂರು ರಾಜ್ಯದ ಪೊಲೀಸರಿಗೆ ಬೇಕಾಗಿದ್ದ ಖತರ್ನಾಕ ಕಳ್ಳ:

ಸರಿಸುಮಾರು ಎಂಟುವರೆ ಗಂಟೆಗಳ ಕಾಲ ಕಳ್ಳಾಟವಾಡಿ ಪೊಲೀಸರಿಗೆ ಶರಣಾದ ಕಿಲಾಡಿ ಕಳ್ಳನ ಹೆಸರು ಖಾಜಪ್ಪ. ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳ್ಳೂರಗಿ ಗ್ರಾಮದ ನಿವಾಸಿ. ಬಳ್ಳೂರಗಿ ಗ್ರಾಮದವನಾದರೂ ಕೂಡ ಈತ ಇರ್ತಿದ್ದು ಹೆಚ್ಚಾಗಿ ಮಹರಾಷ್ಟ್ರದ ಪುಣೆ, ಅಕ್ಕಲಕೋಟೆ ಸೇರಿದಂತೆ ಅನೇಕ ಭಾಗದಲ್ಲಿ ಈತನ ಮೇಲೆ ಬರೋಬ್ಬರಿ 28 ಮನೆಗಳ್ಳತನ ಪ್ರಕರಣಗಳಿವೆ.

ಬಂಧಿಸಲು ಹೋದಾಗ ಪಿಎಸ್‌ಐ ಪಿಸ್ತೂಲ… ಕಸಿದು ಪರಾರಿ:

ಕಳೆದ ಕೆಲ ದಿನಗಳ ಹಿಂದೆ ಈತ ಮಹರಾಷ್ಟ್ರದ ಅಕ್ಕಲಕೋಟೆಯಲ್ಲಿ ಮನೆಕಳ್ಳತನ ಮಾಡಿದ್ದನಂತೆ. ಹೀಗಾಗಿ ಖಾಜಪ್ಪನ ಚಲನವಲನದ ಬಗ್ಗೆ ಅಕ್ಕಲಕೋಟೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದರು. ಆದರೆ, ಕಳೆದ ರಾತ್ರಿ ಆತ ಅಫಜಲಪುರಕ್ಕೆ ಹೋಗ್ತಿರೋದು ಗೊತ್ತಾಗಿತ್ತು. ಹೀಗಾಗಿ ಅಫಜಲಪುರ ಪೊಲೀಸರಿಗೆ ಅಕ್ಕಲಕೋಟೆ ಪೊಲೀಸರು ಮಾಹಿತಿ ನೀಡಿದ್ದರು.

ಸೋಮವಾರ ನಸುಕಿನ ಜಾವ ಮೂರು ಗಂಟೆಯಿಂದ ಅಫಜಲಪುರ ಪೊಲೀಸರು, ಅಫಜಲಪುರ ಹೊರವಲಯದ ಸೊನ್ನ ಕ್ರಾಸ್‌ ಬಳಿ ಚೆಕ್‌ಪೋಸ್ವ್‌ ಹಾಕಿಕೊಂಡು ವಾಹನ ತಪಾಸಣೆ ಮಾಡಿತ್ತಿದ್ದ ವೇಳೆ ಖಾಜಪ್ಪ ಕಾರಿನಲ್ಲಿ ಬಂದಿದ್ದ. ಆದರೆ ಪೊಲೀಸರನ್ನು ನೋಡುತ್ತಿದ್ದಂತೆ, ಕಾರನ್ನು ರಿಟರ್ನ್‌ ತೆಗದುಕೊಂಡು ಹೋಗಲು ಮುಂದಾಗಿದ್ದ. ಕೂಡಲೇ ಅಫಜಲಪುರ ಪಿಎಸ್‌ಐ ಭೀಮರಾಯ… ಬಂಕಲಿ, ಕಾರಿನ ಗಾಜು ಒಡೆದು, ಆತನನ್ನು ಹಿಡಿಯುವ ಯತ್ನ ಮಾಡಿದ್ದರು. ಆದರೆ ಅವರ ಕೈಯಲ್ಲಿದ್ದ ಲೋಡೆಡ್‌ ಸರ್ವಿಸ್‌ ಪಿಸ್ತೂಲ… ಕೈಜಾರಿ ಕಾರಿನೋಳಗೆ ಬಿದಿತ್ತು. ಕಳ್ಳ ಖಾಜಪ್ಪ ಕಾರನೊಂದಿಗೆ ಪರಾರಿಯಾದ.

ಎಂಟುವರೆ ಗಂಟೆ ನಂತರ ಶರಣಾದ ಕಳ್ಳ ಖಾಜಪ್ಪ:

ನಸುಕಿನ ಜಾವ ನಾಲ್ಕು ಗಂಟೆಯಿಂದ ಖಾಜಪ್ಪನಿಗಾಗಿ ಕಲಬುರಗಿ ಜಿಲ್ಲಾ ಪೊಲೀಸರು ಹುಡುಕಾಟ ನಡೆಸಿದ್ದರು. ಆದ್ರೆ ಮುಂಜಾನೆ ಎಂಟು ಗಂಟೆಗೆ ಗೊತ್ತಾಗಿತ್ತು, ಆತ ಬಳ್ಳೂರಗಿ ಹೊರವಲಯದ ಮಹಾಲಕ್ಷ್ಮಿ ದೇವಸ್ಥಾನದ ಬಳಿಯಿದ್ದಾನೆ ಅಂತ. ಅಲ್ಲಿಗೆ ಬರುವಷ್ಟರಲ್ಲಿ ಖಾಜಪ್ಪ ಮರವೇರಿ ಕೂತಿದ್ದ. ಮತ್ತೊಂದಡೆ ಆತನ ಸಹಚರರಾದ ಸಂಜು ಮತ್ತು ರವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಮುಂಜಾನೆ ಎಂಟು ಗಂಟೆಯಿಂದ ಆತನನ್ನು ಮರದಿಂದ ಕೆಳಗಿಳಿಸೋ ಯತ್ನವನ್ನು ಪೊಲೀಸರು ಮಾಡಿದ್ದರು. ಆದ್ರೆ ನನ್ನ ಸಮೀಪ ಬಂದ್ರೆ ನಾನೇ ಫೈರ್‌ ಮಾಡಿಕೊಂಡು ಸಾಯ್ತೇನೆ ಅಂತ ಬೆದರಿಕೆ ಹಾಕಿದ್ದನಂತೆ. ಕೊನೆಗೆ ಆತನ ಕುಟುಂಬದವರನ್ನು ಕರೆಸಿ, ಆತನಿಗೆ ಏನು ಮಾಡೋದಿಲ್ಲಾ ಅಂತ ಹೇಳಿ, ಮನವೊಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರ ಮಧ್ಯಾಹ್ನ 12-45ಕ್ಕೆ ಆರೋಪಿ ಖಾಜಪ್ಪ ಪೊಲೀಸರಿಗೆ ಶರಣಾಗಿದ್ದು, ತನ್ನ ಬಳಿಯಿದ್ದ ಸರ್ವಿಸ್‌ ಪಿಸ್ತೂಲ…ನ್ನು ಪೊಲೀಸರಿಗೆ ನೀಡಿದ್ದಾನೆ.

ಕಲಬುರಗಿ: ಡೀಪೋ ಮ್ಯಾನೇಜರ್‌ ಕಿರುಕುಳ, ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನ

ಕಳ್ಳವೇರಿದ್ದ ಮರದ ಕೆಳಗಿದ್ದ ದೇವಸ್ಥಾನಕ್ಕೆ ಎಸ್ಪಿ ಪೂಜೆ:

ಯಾವುದೇ ತೊಂದರೆಯಿಲ್ಲದೆ ಕಾರ್ಯಾಚರಣೆ ಯಶಸ್ವಿಯಾಗಿದ್ದ ಹಿನ್ನೆಲೆ, ಮರವಿದ್ದ ದೇವಸ್ಥಾನದ ಕೆಳಗಿದ್ದ ಮಹಾಲಕ್ಷ್ಮಿ ದೇವಿಗೆ ಕಲಬುರಗಿ ಎಸ್ಪಿ ಇಶಾ ಪಂತ್‌ ಪೂಜೆ ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಖಾಜಪ್ಪನನ್ನು ವಶಕ್ಕೆ ಪಡೆದಿರೋ ಪೊಲೀಸರು ಆತನಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಿ, ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಆದ್ರೆ ಖಾಜಪ್ಪ ಸಿಗೋವರಗೆ ಪೊಲೀಸರ ಎದೆಬಡಿತ ಮಾತ್ರ ಹೆಚ್ಚಾಗಿದ್ದು ಸತ್ಯ. ಇನ್ನು ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯೇ ನೀಡಿರುವ ಕಲಬುರಗಿ ಎಸ್ಪಿ ಇಶಾ ಪಂತ್‌, ಕಳ್ಳನ ಬಳಿಯಿದ್ದ ಲೋಡೆಡ್‌ ಪಿಸ್ತೂಲ… ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಆತನನ್ನು ವಶಕ್ಕೆ ಪಡೆದಿದ್ದು ಹೆಚ್ಚಿನ ವಿಚಾರಣೆ ನಡೆಸೋದಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!