
ಬೆಂಗಳೂರು(ನ.01): ಹಣಕಾಸಿನ ವಿಚಾರಕ್ಕೆ ಸ್ನೇಹಿತನ ಕೊಂದು ಸಹಜ ಸಾವು ಎಂದು ಕೊಲೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಪ್ರಕರಣ ಕೆ.ಆರ್.ಪುರದಲ್ಲಿ ಬೆಳಕಿಗೆ ಬಂದಿದೆ.
ರಾಜಸ್ಥಾನ ಮೂಲದ ಕರೋಲಿ ಮೂಲದ ರಾಮಕೇಶ್ ಮಾಲಿ (26) ಕೊಲೆಯಾದ ಯುವಕ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್.ಪುರ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ನೆಲಮಂಗಲ: ಮೊಬೈಲ್ ಚಾರ್ಜರ್ ವೈರ್ ಬಳಸಿ ಮಹಿಳೆ ಕೊಲೆ
ಟೈಲ್ಸ್ ಕೆಲಸ ಮಾಡುತ್ತಿದ್ದ ರಾಮಕೇಶ್ ತಮ್ಮ ಊರಿನವರಾದ ವಿಷ್ಣು, ರಾಮ್ಪಾಲ್ ಮತ್ತು ಮೋಹನ್ ಜತೆಗೆ ಮುಳುಬಾಗಿಲಿನ ತಾಟಪಲ್ಲಿ ಬಳಿ ನೆಲೆಸಿದ್ದ. ಕೂಲಿ ವಿಚಾರಕ್ಕೆ ಸೆ.24ರಂದು ರಾಮಕೇಶ್ ಮತ್ತು ವಿಷ್ಣು ನಡುವೆ ಜಗಳ ನಡೆದಿತ್ತು. ಈ ವೇಳೆ ಆರೋಪಿ ದೊಣ್ಣೆಯಿಂದ ರಾಮಕೇಶ್ನ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ರಾಮ್ಪಾಲ್ ಮತ್ತು ಮೋಹನ್ ಕೂಡ ರಾಮಕೇಶ್ಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದರು.
ಟ್ರ್ಯಾಕ್ಟರ್-ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ
ತೀವ್ರ ರಕ್ತಸ್ರಾವವಾಗಿ ಕುಸಿದ ಗಾಯಾಳುವನ್ನು ಆರೋಪಿಗಳು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಕುಡಿದು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಆಸ್ಪತ್ರೆ ಅವರ ಬಳಿ ಹೇಳಿದ್ದರು. ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಪೊಲೀಸರ ಅಸಹಜ ಸಾವು ಪ್ರಕರಣ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೋಷಕರಿಗೆ ಒಪ್ಪಿಸಿದ್ದರು. ರಾಜಸ್ಥಾನದಲ್ಲಿ ರಾಮಕೇಶ್ನ ಅಂತ್ಯಕ್ರಿಯೆ ಆಗಿತ್ತು.
ಸಾವಿನ ಬಗ್ಗೆ ಗ್ರಾಮಸ್ಥರು ಕೆಲ ದಿನಗಳ ಹಿಂದೆ ರಾಮ್ಪಾಲ್ ಮತ್ತು ಮೋಹನ್ನನ್ನು ಪ್ರಶ್ನಿಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದರು. ಪೋಷಕರು ಪೊಲೀಸರಿಗೆ ತಿಳಿಸಿದ್ದು, ಇದೀಗ ಪ್ರಮುಖ ಆರೋಪಿ ಬಂಧನಕ್ಕೆ ಹುಡುಕಾಟ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ