Cauvery river pollution ಶ್ರೀರಂಗಪಟ್ಟಣ: ಅಸ್ಥಿ ವಿಸರ್ಜನೆ ವೇಳೆ ಕಾವೇರಿ ನದಿಗೆ ಬಟ್ಟೆ ಎಸೆಯವಂತಿಲ್ಲ

Kannadaprabha News, Ravi Janekal |   | Kannada Prabha
Published : Feb 12, 2026, 06:04 AM IST
Mandya dc bans discarding clothes in cauvery river during ash immersion srirangapatna

ಸಾರಾಂಶ

ಕಾವೇರಿ ನದಿ ಮಾಲಿನ್ಯ ತಡೆಯಲು, ಮಂಡ್ಯ ಜಿಲ್ಲಾಡಳಿತವು ಅಸ್ಥಿ ವಿಸರ್ಜನೆ ವೇಳೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದನ್ನು ನಿಷೇಧಿಸಿದೆ. ನದಿಯ ಪಾವಿತ್ರ್ಯತೆ ಕಾಪಾಡಲು ಸಿಸಿಟಿವಿ ಅಳವಡಿಕೆ ಹಾಗೂ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಂಡ್ಯ (ಫೆ.12): ಕಾವೇರಿ ನದಿ ಪಾತ್ರದಲ್ಲಿ ಅಸ್ಥಿ ವಿಸರ್ಜನೆ ವೇಳೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಧಾರ್ಮಿಕ ವಿಧಿ-ವಿಧಾನಗಳ ಆಚರಣೆ ಹಾಗೂ ಅಸ್ಥಿ ವಿಸರ್ಜನೆ ಮಾಡುವಾಗ ನೈರ್ಮಲ್ಯ ಕಾಪಾಡುವ ಕ್ರಮಗಳನ್ನು ಕೈಗೊಳ್ಳುವಂತೆ ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. 

ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಲು ಪುರೋಹಿತರಿಗೆ ನಿರ್ದಿಷ್ಟ ದರ ನಿಗದಿಪಡಿಸಬೇಕು. ಅಸ್ಥಿ ವಿಸರ್ಜನೆ ಮಾಡುವ ಸ್ಧಳಗಳಲ್ಲಿ ಸಿಸಿ ಟೀವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಂಗೀತ ನಿರ್ದೇಶಕ ಸಾಧು ಕೋಕಿಲ, ನಟ ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್

 

ವೈಜ್ಞಾನಿಕ ರೀತಿಯಲ್ಲಿ

ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಸ್ಥಳಕ್ಕೆ ಭೇಟಿ ನದಿ ಪಾತ್ರವು ಮಲಿನ ಆಗದಂತೆ ಕ್ರಮ ಕೈಗೊಳ್ಳಬೇಕು. ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪ್ರತ್ಯೇಕವಾದ ಮಾರ್ಗಸೂಚಿ ಸಿದ್ಥಪಡಿಸಿ ಹಾಗೂ ನದಿ ಪಾತ್ರವು ಮಲೀನವಾಗದಂತೆ ಅಗತ್ಯಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮತ್ತೆ ಗದ್ದುಗೆ ಗದ್ದಲ : ಕೊಟ್ಟ ಮಾತಂತೆ ನಡೀತಾರೆ ಎಂದ ಡಿಕೆಸು, 2028ಕ್ಕೂ ಸಿದ್ದು ನೇತೃತ್ವ: ಜಮೀರ್‌
Dowry Harassment Case: ವರದಕ್ಷಿಣೆ ಕಿರುಕುಳ: ಪತಿಯ ಪ್ರೇಯಸಿ ವಿರುದ್ಧ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ: ಹೈಕೋರ್ಟ್