'ಮನೆಗೊಂದು ಕೋಳಿ, ಊರಿಗೊಂದು ಕುರಿ' ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಅಭಿಯಾನ

Published : Dec 19, 2024, 08:03 AM IST
'ಮನೆಗೊಂದು ಕೋಳಿ, ಊರಿಗೊಂದು ಕುರಿ' ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಅಭಿಯಾನ

ಸಾರಾಂಶ

ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧ ವಿರೋಧಿಸಿ, ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನ ಆರಂಭವಾಗಿದೆ. ಬಾಡೂಟ ಬಳಗದ ಉದ್ದೇಶ ಮಾಂಸಹಾರದ ಪ್ರಾತಿನಿಧ್ಯ ಇರಬೇಕೆಂಬುದಾಗಿದೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಮಂಡ್ಯ (ಡಿ.19): ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಬುಧವಾರದಿಂದ ಚಾಲನೆ ನೀಡಲಾಗಿದೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡೂಟ, ಬಾಡೂಟದ ಬಳಗವನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ನಡೆಯುತ್ತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರದ ಆಗ್ರಹ ಎಂಬ ತಪ್ಪು ಸಂದೇಶ ರವಾನೆಯಾಗುತ್ತಿದೆ. ಆದರೆ, ನಾವು ಮಾಂಸಹಾರದ ಪ್ರಾತಿನಿಧ್ಯ ಇರಬೇಕೆಂಬುದು ಬಳಗದ ಉದ್ದೇಶವಾಗಿದೆ ಎಂದರು.

ಮೊದಲು ಸಮ್ಮೇಳನದಲ್ಲಿ ತಂಬಾಕು, ಮದ್ಯಪಾನ ಹಾಗೂ ಮಾಂಸಹಾರ ನಿಷೇಧ ಎಂಬ ಹೇಳಿಕೆ ವಿರುದ್ಧ ಇದು ಪ್ರಾರಂಭವಾಗಿದೆ. ಮಾಂಸಹಾರಕ್ಕೆ ಯಾವುದೇ ರೀತಿಯಲ್ಲಿ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ, ಅಸ್ಪೃಶ್ಯತೆಯಿಂದ ಕಾಣುತ್ತಿದ್ದು, ಇದನ್ನು ಹೋಗಲಾಗಡಿಸುವ ಪ್ರಯತ್ನ ನಮ್ಮದಾಗಿದೆ ಎಂದು ಹೇಳಿದರು.

ಮಂಡ್ಯ ಸಾಹಿತ್ಯ ಸಮ್ಮೇಳನ : ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ

ಸಮ್ಮೇಳನದಲ್ಲಿ ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಂಸ ನೀಡುವುದರಲ್ಲಿ ಸಮಸ್ಯೆ ಏನಿದೆ. ಬಾಡೂಟಕ್ಕೆ ಅವಕಾಶ ನೀಡದಿದ್ದರೆ ಇಂದಿನಿಂದ ಕೋಳಿ ಮತ್ತು ಮೊಟ್ಟೆ ಸಂಗ್ರಹಿಸಿ ದಾಸ್ತಾನು ಮಾಡಲಾಗುತ್ತಿದೆ ಎಂದು ತಿಳಿಸಿದರು. ವಿಚಾರವಾದಿ ಸಂತೋಷ್ ಮಾತನಾಡಿ, ಆಹಾರ ಸಮಿತಿ ಬಾಡೂಟ ಅನುಷ್ಠಾನಕ್ಕೆ ಮುಂದಾದರೆ ನಾವು ಸಂಗ್ರಹಿಸಿದ ಕುರಿ, ಕೋಳಿ, ಧಾನ್ಯಗಳನ್ನು ಸಮಿತಿಗೆ ಸಲ್ಲಿಸುತ್ತೇವೆ. ಅನುಷ್ಠಾನಗೊಳಿಸದಿದ್ದರೆ ಸಮ್ಮೇಳನ ಸ್ಥಳದ ಆಸುಪಾಸಿನಲ್ಲಿ ಖಂಡನಾ ಸಭೆ ನಡೆಸಿ ಸಾಹಿತ್ಯ ಅತಿಥಿಗಳಿಗೆ ಮೊಟ್ಟೆ, ಮಾಂಸದ ತುಂಡು ನೀಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಸುದ್ದಿಗೋಷ್ಠಿ ಎಂ.ಬಿ.ನಾಗಣ್ಣಗೌಡ, ಸಮಾನ ಮನಸ್ಕರ ವೇದಿಕೆ ಲಕ್ಷ್ಮಣ್ ಚೀರನಹಳ್ಳಿ, ಸಿಐಟಿಯು ಸಿ.ಕುಮಾರಿ, ಮನ್ನೂರ್, ವಕೀಲ ಶಿವಶಂಕರ್, ಧನುಷ್ ಇದ್ದರು.-

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉ.ಕ. ಚರ್ಚೆ ವೇಳೆ ವಿಪಕ್ಷಕ್ಕೆ ತಿರುಗೇಟು: ಸಿಎಲ್‌ಪಿ ನಿರ್ಧಾರ
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಶುರು