ಸರ್ಕಾರಕ್ಕೆ ಸೆಡ್ಡು ಹೊಡೆದ ಮಂಡ್ಯದ ಯುವ ರೈತ; ಕೃಷಿ ವಿವಿ ಆರಂಭಕ್ಕೂ ಮುನ್ನವೇ ದೇಶದ ಮೊದಲ ರೈತ ಶಾಲೆ ಆರಂಭ!

Published : Jun 16, 2025, 09:37 PM IST
Mandya Youth Farmers Launch India's First Farmer School in Alakere Village

ಸಾರಾಂಶ

ಮಂಡ್ಯದ ಆಲಕೆರೆ ಗ್ರಾಮದಲ್ಲಿ ಯುವ ರೈತರ ನೇತೃತ್ವದಲ್ಲಿ ದೇಶದ ಮೊದಲ ರೈತ ಶಾಲೆ ಆರಂಭವಾಗಿದೆ. ಈ ಶಾಲೆಯು ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ, ಫಸಲು ಸಂರಕ್ಷಣೆ, ಹವಾಮಾನಕ್ಕೆ ತಕ್ಕ ಬೀಜ ಬಳಕೆ ಮುಂತಾದವುಗಳ ಬಗ್ಗೆ ತರಬೇತಿ ನೀಡಲಿದೆ.

ಮಂಡ್ಯ (ಜೂ.16): ಕೃಷಿ ವಿಶ್ವವಿದ್ಯಾಲಯ ಆರಂಭಕ್ಕೂ ಮುನ್ನವೇ ಮಂಡ್ಯ ಜಿಲ್ಲೆಯ ಯುವ ರೈತರು ದೇಶದ ಮೊದಲ ರೈತ ಶಾಲೆಯನ್ನು ಆರಂಭಿಸಿ ಸಂಚಲನ ಸೃಷ್ಟಿಸಿದ್ದಾರೆ. ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಒಡನಾಟದಲ್ಲಿ, ಯುವ ರೈತ ಸತ್ಯಮೂರ್ತಿ ಅವರ ನೇತೃತ್ವದಲ್ಲಿ ಈ ಅಪೂರ್ವ ರೈತ ಶಾಲೆ ಉದ್ಘಾಟನೆಗೊಂಡಿದೆ.

ಈ ಶಾಲೆಯು ರೈತರಿಗೆ ಕೃಷಿ ಶಿಕ್ಷಣ, ಆರ್ಥಿಕ ಸ್ವಾವಲಂಬನೆ, ಕೃಷಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ, ಹವಾಮಾನಕ್ಕೆ ತಕ್ಕ ಬೀಜ ಬಳಕೆ, ಫಸಲು ಸಂರಕ್ಷಣೆ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳ ಬಗ್ಗೆ ತರಬೇತಿ ನೀಡಲಿದೆ.

ಈ ಕಾರ್ಯಕ್ರಮವು ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನವನ್ನು ತಿಳಿಯಲು ಮತ್ತು ಆರ್ಥಿಕವಾಗಿ ಸದೃಢರಾಗಲು ದಾರಿ ಮಾಡಿಕೊಡಲಿದೆ. ರೈತ ಶಾಲೆಯ ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಕೆಂಗೇರಿಯ ಒಕ್ಕಲಿಗರ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಜಂಟಿಯಾಗಿ ನೆರವೇರಿಸಿದರು. ಈ ಐತಿಹಾಸಿಕ ಕಾರ್ಯಕ್ರಮವು ದೇಶದ ಕೃಷಿ ಕ್ಷೇತ್ರದಲ್ಲಿ ಹೊಸ ದಿಗಂತವನ್ನು ತೆರೆಯಲಿದೆ ರೈತ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನ್ನದಾತರಿಗೆ ಜ್ಞಾನದ ದೀಪವನ್ನು ಹೊತ್ತಿಸುವ ಈ ರೈತ ಶಾಲೆಯು ಮಂಡ್ಯದಿಂದ ದೇಶಕ್ಕೆ ಮಾದರಿಯಾಗಲಿದೆ. ಈ ಕ್ರಾಂತಿಕಾರಿ ಹೆಜ್ಜೆ ಕೃಷಿಕರ ಭವಿಷ್ಯವನ್ನು ಬೆಳಗಲಿದೆ ಎಂಬ ನಂಬಿಕೆಯನ್ನು ಎಲ್ಲರೂ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌