
ಮಂಡ್ಯ (ಜ.29): ರಾಜ್ಯದ ಸಕ್ಕರೆನಾಡು ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಬ ನಿರ್ಮಿಸಿ ಹನುಮಾ ಧ್ವಜವನ್ನು ಹಾರಿಸಲು, ಧ್ವಜ ತೆರವಿನಿಂದಾದ ಗಲಾಟೆ ಮತ್ತು ಸಂಘರ್ಷಕ್ಕೆ ನೇರವಾಗಿ ಕೆರಗೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೇ ನೇರ ಕಾರಣವೆಂದು ಕಾಂಗ್ರೆಸ್ ಸರ್ಕಾರ ಪಿಡಿಒ ಜೀವನ್.ಎಂ.ಬಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಕೆರಗೋಡು ಗ್ರಾಮದಲ್ಲಿ ಕಳೆದ 35 ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಹಿತ್ಯಿಕ ಸೇವೆಯನ್ನು ಮಾಡುತ್ತಿರುವ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ಗೆ ಗ್ರಾಮದ ರಾಮಮಂದಿರ ಮುಂಭಾಗದ ಖಾಲಿ ಸ್ವತ್ತಿನಲ್ಲಿ 108 ಅಡಿ ಬೃಹತ್ ಧ್ವಜಸ್ತಂಬ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿ (ಪಿಡಿಒ) ಜೀವನ್ ಅವರು ನಿಯಮ ಬಾಹಿರವಾಗಿ ಅನುಮತಿ ನೀಡಿದ್ದಾರೆ. ಜೊತೆಗೆ, ರಾಷ್ಟ್ರಧ್ವಜದ ಬದಲಾಗಿ ಹನುಮ ಧ್ವಜವನ್ನು ಹಾರಿಸಿದರೂ ಅದನ್ನು ತೆರವುಗೊಳಿಸದೇ ನಿರ್ಲಕ್ಷ್ಯ ತೋರಲಾಗಿದೆ. ಜೊತೆಗೆ, ಹಿರಿಯ ಅಧಿಕಾರಿಗಳು ಸ್ಥಳ ಭೇಟಿಗೆ ಬಂದಾಗ ಉಂಟಾದ ಪ್ರತಿಭಟನೆ ಹಾಗೂ ಗೊಂದಲಕ್ಕೆ ನೀವೇ ಕಾರಣವೆಂದು ಹೇಳಿ ಪಿಡಿಒ ಅವರನ್ನು ತಲೆದಂಡವನ್ನಾಗಿ ಮಾಡಿ ಅಮಾನತು ಮಾಡಲಾಗಿದೆ.
ಹನುಮಂತನ ಕೆಣಕ್ಕಿದ್ದಕ್ಕೆ ಲಂಕ ದಹನವಾಯ್ತು, ಈಗ ಹನುಮಧ್ವಜ ತೆಗೆದವರ ಅವನತಿಯೂ ಆಗುತ್ತೆ: ಹೆಚ್.ಡಿ. ಕುಮಾರಸ್ವಾಮಿ
ಕೆರಗೋಡು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಜೀವನ್.ಬಿ.ಎಂ ಅಮಾನತು ಆಗಿರುವ ಅಧಿಕಾರಿಯಾಗಿದ್ದಾರೆ. ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಅವರು 5 ಕಾರಣ ನೀಡಿ ಪಿಡಿಓ ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ.
ಪಿಡಿಒ ಅಮಾನತು ಆದೇಶಕ್ಕೆ 5 ಕಾರಣ ಕೊಟ್ಟ ಸರ್ಕಾರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ