ಮಸೀದಿ ಎದುರು ಮಂಗಳಾರತಿ: ಹಿಂದೂ ಕಾರ್ಯಕರ್ತರ ವಿರುದ್ದ ದೂರು

Published : Oct 03, 2023, 08:29 AM IST
ಮಸೀದಿ ಎದುರು ಮಂಗಳಾರತಿ: ಹಿಂದೂ ಕಾರ್ಯಕರ್ತರ ವಿರುದ್ದ ದೂರು

ಸಾರಾಂಶ

ಕಳೆದ ಮೂರು ದಿನಗಳ ಹಿಂದೆ ಹಿಂದೂ ಮಹಾಮಂಡಳಿಯವರು ಗಣೇಶ ವಿಸರ್ಜನೆ ವೇಳೆ ನಗರದ ಜಾಮೀಯ ಮಸೀದಿ ಮುಂಭಾಗ ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಿಂದೂಪರ ಸಂಘಟನೆಯ ಕಾರ್ಯಕರ್ತರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. 

ಗಂಗಾವತಿ (ಅ.3): ಕಳೆದ ಮೂರು ದಿನಗಳ ಹಿಂದೆ ಹಿಂದೂ ಮಹಾಮಂಡಳಿಯವರು ಗಣೇಶ ವಿಸರ್ಜನೆ ವೇಳೆ ನಗರದ ಜಾಮೀಯ ಮಸೀದಿ ಮುಂಭಾಗ ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಿಂದೂಪರ ಸಂಘಟನೆಯ ಕಾರ್ಯಕರ್ತರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. 

ಇಲ್ಲಿನ ಮಹಾತ್ಮಗಾಂಧಿ ವೃತ್ತದ ಬಳಿಯ ಜಾಮೀಯ ಮಸೀದಿ ಮುಂಭಾಗ ಗಣೇಶಮೂರ್ತಿಯನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ತರಲಾಗಿತ್ತು. ಈ ಸಂದರ್ಭದಲ್ಲಿ ಹಿಂದೂಪರ ಸಂಘಟನೆಯ ಕೆಲ ಪ್ರಮುಖರು ಮಸೀದಿ ಮುಂಭಾಗವೇ ನಿಂತು ಮಂಗಳಾರತಿ ಮಾಡಿ, 'ಜೈ ಶ್ರೀರಾಮ್' ಎಂದೂ ಘೋಷಣೆ ಕೂಗಿದ್ದರು. 

 

ಗಣೇಶೋತ್ಸವಕ್ಕೆ ಕೇಸರಿಮಯವಾಗಿದ್ದ ಶಿವಮೊಗ್ಗ; ಈದ್ ಮಿಲಾದ್ ಹಸಿರುಮಯವಾಯ್ತು ನಗರ!

ಇದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಘಟನೆ ಎಂದಿರುವ ಪೊಲೀಸರು, ಇದಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಯ ಐವರು ಮತ್ತು ಇತರರ ವಿರುದ್ಧ ಸ್ವಯಂ ಪ್ರೇರಿತಚವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ಗಲಭೆ ಬಗ್ಗೆ ವರದಿ ಕೇಳಿದ ಸಿಎಂ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಿ ಕೋಮುಗಲಭೆ ಎಬ್ಬಿರುವ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ವರದಿ ಕೇಳಿದ್ದಾರೆ.

ಘಟನೆ ಬಗ್ಗೆ ಸಮಗ್ರ ವರದಿ ನೀಡಬೇಕು. ಘಟನೆಗೆ ಮೂಲ ಕಾರಣ ಏನು? ಘಟನೆ ಹಿಂದೆ ಯಾರಿದ್ದಾರೆ. ಎಷ್ಟು ಜನರನ್ನು ಬಂಧಿಸಲಾಗಿದೆ ಎಂಬ ಬಗ್ಗೆ ಪೂರ್ಣ ವರದಿ ನೀಡಿ. ಕೃತ್ಯ ನಡೆಸಿರುವವರು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕು. ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕೆಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೇಸರಿ ಬಾವುಟ ತೆರವಿನಿಂದ ಗೊಂದಲ: ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ

ಇಂತಹ ಕೃತ್ಯ ಸಹಿಸಲ್ಲ:

ಈ ಮಧ್ಯೆ ಶಿವಮೊಗ್ಗ ಘಟನೆ ಕುರಿತು ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ದೇವರು, ಧರ್ಮದ ಕಾರ್ಯಕ್ರಮಗಳಿಗೆ ಧಕ್ಕೆ ತರುವುದು, ಕಲ್ಲುತೂರುವಂತಹ ಕೃತ್ಯ ನಡೆಸುವುದನ್ನು ಸಹಿಸುವುದಿಲ್ಲ. ಇಂತಹದ್ದನ್ನು ಹತ್ತಿಕ್ಕುತ್ತೇವೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ