ಆತ್ಮ ದೇವರಿಗೆ, ದೇಹ ಆಸ್ಪತ್ರೆಗೆ: ಕಂದ ಅರ್ಥವಿದೆ ನಿನ್ನ ಸಾವಿಗೆ!

Published : Nov 03, 2018, 06:18 PM ISTUpdated : Nov 03, 2018, 08:00 PM IST
ಆತ್ಮ ದೇವರಿಗೆ, ದೇಹ ಆಸ್ಪತ್ರೆಗೆ: ಕಂದ ಅರ್ಥವಿದೆ ನಿನ್ನ ಸಾವಿಗೆ!

ಸಾರಾಂಶ

ಬಾಲಕಿಯೊಬ್ಬಳು ತಾನು ಸಾಯುವೆನೆಂದು ತಿಳಿದ ಬಳಿಕ ತನ್ನ ದೇಹದಾನಕ್ಕೆ ಮುಂದಾಗುವ ಮೂಲಕ ಇತರರಿಗೆ ಮಾದರಿಯಾದ ಘಟನೆ ಕರ್ನಾಟಕ ಕರಾವಳಿ ನಗರ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು(ನ.3): ಬಾಲಕಿಯೊಬ್ಬಳು ತಾನು ಸಾಯುವೆನೆಂದು ತಿಳಿದ ಬಳಿಕ ತನ್ನ ದೇಹದಾನಕ್ಕೆ ಮುಂದಾಗುವ ಮೂಲಕ ಇತರರಿಗೆ ಮಾದರಿಯಾದ ಘಟನೆ ಕರ್ನಾಟಕ ಕರಾವಳಿ ನಗರ ಮಂಗಳೂರಿನಲ್ಲಿ ನಡೆದಿದೆ.

16 ವರ್ಷದ ಪ್ರತೀಕ್ಷಾ ಮಂಗಳೂರು ಅಶೋಕನಗರ ನಿವಾಸಿ ಕುಮಾರಸ್ವಾಮಿ ಕೊಕ್ಕಡ ಮತ್ತು ವಂದನಾ ಕುಮಾರಸ್ವಾಮಿ ಅವರ ಪುತ್ರಿಯಾಗಿದ್ದು ಶಾರದಾ ವಿದ್ಯಾಲಯದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಆಕೆಗೆ ತನ್ನ ಹತ್ತನೇ ವರ್ಷದಲ್ಲೇ ಮೂಳೆಯ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಇದರಿಂದ ಹಾಸಿಗೆ ಹಿಡಿದಿದ್ದ ಬಾಲಕಿ ಕುಟುಂಬದ ಸ್ನೇಹಿತರು, ಶಾಲೆಯ ಉಪಾದ್ಯಾಯರ ಸಹಕಾರದೊಡನೆ ಎರಡು ವರ್ಷದ ಬಳಿಕ ಗುಣಮುಖವಾಗಿದ್ದಳು. ಆದರೆ ಕೆಲವೇ ತಿಂಗಳ ಹಿಂದೆ ಮತ್ತೆ ಈ ಮಾರಕ ರೋಗ ಮರುಕಳಿಸಿತ್ತು. 

ಖಾಯಿಲೆಯೊಡನೆ ಹೋರಾಡುತ್ತಲೇ ವ್ಯಾಸಂಗ ಮುಂದುವರಿಸಿದ್ದ ಪ್ರತೀಕ್ಷಾ ಕಳೆದ ಗುರುವಾರ ಕೊನೆಯುಸಿರೆಳೆದಿದ್ದಾಳೆ. ಅನಾರೋಗ್ಯದಿಂದ ಶಾಲೆಗೆ ಹಾಜರಾಗಲು ಸಾಧ್ಯವಾಗದ ಪ್ರತೀಕ್ಷಾಗೆ ಶಾಲಾ ಶಿಕ್ಷಕರೇ ಮನೆಗೆ ಆಗಮಿಸಿ ಧೈರ್ಯ ಹೇಳಿದ್ದರು. ಈ ನಡುವೆ ತಾನು ಸಾಯುವುದು ಖಚಿತ ಎನ್ನುವುದು ಬಾಲಕಿಗೆ ತಿಳಿದು ಹೋಗಿತ್ತು.

ಅದೊಂದು ದಿನ ಆಸ್ಪತ್ರೆಯಲ್ಲಿ ತನ್ನ ತಾಯಿಯನ್ನು ಹತ್ತಿರಕ್ಕೆ ಕರೆದ ಪ್ರತೀಕ್ಷಾ "ಒಂದೊಮ್ಮೆ ನನ್ನ ಆತ್ಮ ದೇವರಿಗೆ ಪ್ರಿಯವಾದದ್ದಾದರೆ ನನ್ನ ದೇಹ ಅಂತ್ಯ ಸಂಸ್ಕಾರವನ್ನು ಮಾಡದೆ ಆಸ್ಪತ್ರೆಗೆ ದಾನ ನೀಡಿ" ಎಂದಿದ್ದಾಳೆ. ಇದನ್ನು ಕೇಳಿದ ಆಕೆಯ ತಾಯಿ ದಿಗ್ಭ್ರಮೆಯಿಂದ ಮೂರ್ಛೆ ಹೋಗಿದ್ದರು ಎನ್ನಲಾಗಿದೆ. ಆದರೆ ಹೀಗೆ ಹೇಳಿದ್ದ ಎರಡನೇ ದಿನವೇ ಮಗು ಪ್ರತೀಕ್ಷಾ ಸಾವಿಗೀಡಾಗಿದ್ದಾಳೆ.

ಇದೀಗ ಬಾಲಕಿಯ ಕೊನೆಯಾಸೆಯಂತೆಯೇ ಆಕೆಯ ಪೋಷಕರು, ಬಂಧುಗಳು ಬಾಲಕಿಯ ಮೃತದೇಹವನ್ನು ಕೆಎಂಸಿ ಆಸ್ಪತ್ರೆಗೆ ದಾನ ಮಾಡಿದ್ದಾರೆ. "ಪ್ರತೀಕ್ಷಾಗೆ ವೈದ್ಯ ವೃತ್ತಿಯು ಬಹಳ ಇಷ್ಟವಾಗಿತ್ತು. ಆಕೆ ವಿಜ್ಞಾನದಲ್ಲಿ ಆಸಕ್ತಿ ಹೊಂದಿದ್ದಳು. ಇದಕ್ಕೆ ಸರಿಹೊಂದುವಂತೆ ಆಕೆ ದೇಹದಾನಕ್ಕಾಗಿ ಬೇಡಿಕೆ ಇಟ್ಟಿದ್ದಳೆಂದು ನಾವು ಭಾವಿಸಿದ್ದೇವೆ" ಬಾಲಕಿಯ ಪೋಷಕರು ಹೇಳಿದ್ದಾರೆ.

ಪ್ರತೀಕ್ಷಾ ತನ್ನ ಇಬ್ಬರು ಸೋದರರು ಹಾಗೂ ಅಪಾರ ಬಂಧುಗಳು, ಸ್ನೇಹಿತರನ್ನು ಅಗಲಿದ್ದಾಳೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ