ಮಂಗಳೂರು ಗಲಭೆ : ಪರಿಸ್ಥಿತಿ ನಿಭಾಯಿಸಿದ ಪೊಲೀಸರಿಗೆ 10 ಲಕ್ಷ ಬಹುಮಾನ

Suvarna News   | Asianet News
Published : Dec 26, 2019, 11:09 AM IST
ಮಂಗಳೂರು ಗಲಭೆ : ಪರಿಸ್ಥಿತಿ ನಿಭಾಯಿಸಿದ ಪೊಲೀಸರಿಗೆ 10 ಲಕ್ಷ ಬಹುಮಾನ

ಸಾರಾಂಶ

ಮಂಗಳೂರು ಗಲಭೆ ವೇಳೆ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಿದ ಪೊಲೀಸರಿಗೆ ಕರ್ನಾಟಕ ಸರ್ಕಾರ ನಗದು ಬಹುಮಾನವ್ನನು ಘೋಷಿಸಿದೆ. 

ಮಂಗಳೂರು [ಡಿ.26]: ಮಂಗಳೂರಿನಲ್ಲಿ ಡಿಸೆಂಬರ್ 19 ರಂದು ನಡೆದ ಗಲಭೆ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಮಂಗಳೂರು ಪೊಲೀಸರಿಗೆ ಸರ್ಕಾರ ಬಹುಮಾನ ಘೋಷಿಸಿದೆ. 

ಸರ್ಕಾರದಿಂದ ಪೊಲೀಸರಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಹಿಂಸಾಚಾರ ನಡೆದಾಗಲೂ ಪರಿಸ್ಥಿತಿಯನ್ನು ಹತೋಟಿಗೆ ತಂದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. 

ಈ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಒಟ್ಟು 149 ಮಂದಿ ಪೊಲೀಸರಿಗೆ ಕರ್ನಾಟಕ ಸರ್ಕಾರ ನಗದು ಬಹುಮಾನ ಘೋಷಣೆ ಮಾಡಲಾಗಿದೆ. 

ಪರಿಸ್ಥಿತಿಯನ್ನು ಶಾಂತಗೊಳಿಸಿದ ಪೊಲೀಸರಿಗೆ ಒಟ್ಟು 10 ಲಕ್ಷ ಬಹುಮಾನವನ್ನು ಸರ್ಕಾರ ಘೋಷಿಸಿದೆ. 

ಫೈರ್ ಮಾಡಿದ್ರೂ ಒಬ್ರೂ ಸಾಯಲಿಲ್ಲ ಎಂದ SI ವಿರುದ್ಧ ದೂರು...

ಡಿಸೆಂಬರ್ 19 ರಂದು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಏಕಾ ಏಕಿ ಹಿಂಸಾಚಾರಕ್ಕೆ ತಿರುಗಿದ್ದು, ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಪೊಲೀಸರು ಸಫಲರಾಗಿದ್ದರು.  

ಅಲ್ಲದೇ ಈ ವೇಳೆ ಗೋಲಿಬಾರ್ ನಡೆದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ಅಲ್ಲದೇ ಮೂರು ದಿನಗಳ ಕಾಲ ನಗರದಲ್ಲಿ ಕರ್ಫ್ಯೂ ವಿಧಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಯಲ್ಲಿ ಇಡಲಾಗಿತ್ತು. ಪರಿಸ್ಥಿತಿ ಸಮಪೂರ್ಣವಾಗಿ ಶಾಂತವಾಗುವ ವರೆಗೂ ಕೂಡ ನಗರದಲ್ಲಿ ಪೊಲೀಸರು ಕಾರ್ಯನಿರ್ವಹಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್