
ಬೆಂಗಳೂರು, (ಅ.04): ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಮನೋಜ್ ಕುಮಾರ್ ಮೀನಾ ಅವರು ನೇಮಕವಾಗಿದ್ದಾರೆ.
ಮುಖ್ಯ ಚುನಾವಣಾಧಿಕಾರಿಯಾಗಿದ್ದ ಸಂಜೀವ್ ಕುಮಾರ್ ಅವರ ಅಧಿಕಾರವಧಿ ಸೆಪ್ಟೆಂಬರ್ 30ಕ್ಕೆ ಅಂತ್ಯಗೊಂಡಿತ್ತು. ಅವರಿಂದ ತೆರವಾಗಿರುವ ಸ್ಥಾನಕ್ಕೆ ಮನೋಜ್ ಕುಮಾರ್ ಮೀನಾ ಅವರನ್ನು ನೇಮಿಸಲಾಗಿದೆ.
ಜಿಲ್ಲಾ, ತಾಲೂಕು ಪಂಚಾಯಿತಿ ಎಲೆಕ್ಷನ್ ಮುಂದೂಡಿಕೆಗೆ ಹೆಜ್ಜೆ ಇಟ್ಟ ಸರ್ಕಾರ
ರಾಜ್ಯ ಸರ್ಕಾರ ಇಂದು (ಅ.04) ಆದೇಶ ಹೊರಡಿಸಿದ್ದು, ರಾಜ್ಯ ವಸತಿ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ಮನೋಜ್ ಕುಮಾರ್ ಮೀನಾ ಅವರನ್ನು ಬಿಡುಗಡೆಗೊಳಿಸಿ, ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನೇಮಿಸಿದೆ.
ಹೊಸ ಮುಖ್ಯ ಚುನಾವಣಾಧಿಕಾರಿ ನೇಮಕವಾಗಿದ್ದರಿಂದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಶೀಘ್ರದಲ್ಲಿಯೇ ದಿನಾಂಕ ಘೋಷಣೆಯಾಗುವ ಸಾಧ್ಯತೆಗಳಿವೆ.
2003 ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ರಾಜಸ್ಥಾನ ಮೂಲದ ಮನೋಜ್ ಕುಮಾರ್ ಮೀನಾ ಅವರು ಈ ಹಿಂದೆ ಅಂದ್ರೆ 2017-18ರಲ್ಲಿ ಆರೋಗ್ಯ ಇಲಾಖೆಯ ಆಯುಕ್ತರಾಗಿದ್ದರು.
ಅಲ್ಲದೇ ಯಾದಗಿರಿಯಲ್ಲಿ ಸಹಾಯಕ ಆಯುಕ್ತರಾಗಿ, ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಸಹಾಯಕ ಅಧಿಕಾರಿ, ಚಾಮರಾಜನಗರ ಉಪ ಆಯುಕ್ತರು ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ