'ಒಂದಕ್ಕೊಂದನ್ನ ಜೋಡಿಸಬಾರದು..' ಧರ್ಮಸ್ಥಳ ವಿವಾದದ ಬಗ್ಗೆ ಮಂತ್ರಾಲಯ ಶ್ರೀಗಳು ಮಹತ್ವದ ಹೇಳಿಕೆ

Published : Aug 04, 2025, 03:00 PM ISTUpdated : Aug 04, 2025, 03:02 PM IST
Mantralaya shree on dharmasthala case

ಸಾರಾಂಶ

ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದ ಕುರಿತು ಮಂತ್ರಾಲಯ ಶ್ರೀಗಳು ಹೇಳಿಕೆ ನೀಡಿದ್ದಾರೆ. ನ್ಯಾಯಾಲಯದ ತನಿಖೆಯ ಮೂಲಕ ಸತ್ಯ ಹೊರಬೀಳಲಿದೆ ಎಂದಿದ್ದಾರೆ. ಧಾರ್ಮಿಕ ಕ್ಷೇತ್ರದ ಪಾವಿತ್ರತೆಯನ್ನು ವ್ಯವಸ್ಥೆಯ ಲೋಪದೋಷಗಳೊಂದಿಗೆ ಜೋಡಿಸಬಾರದು ಎಂದೂ ಅಭಿಪ್ರಾಯಪಟ್ಟಿದ್ದಾರೆ.

ರಾಯಚೂರು, (ಆಗಸ್ಟ್.4): ಧರ್ಮಸ್ಥಳದ ಶವ ಹೂತಿಟ್ಟ ವಿವಾದ ಪ್ರಕರಣದ ಕುರಿತು ಮಂತ್ರಾಲಯ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ತನಿಖೆಯ ಹಂತದಲ್ಲಿದ್ದು, ಹೊರಗಿನ ಚರ್ಚೆಗಳು ಸೂಕ್ತವಲ್ಲ ಎಂದರು.

ಧರ್ಮಸ್ಥಳದಲ್ಲಿ ಏನೇ ನಡೆದರೂ ಅದು ನ್ಯಾಯಾಲಯ ಮತ್ತು ತನಿಖೆಯ ಮೂಲಕ ಎಲ್ಲ ಸತ್ಯಗಳು ಬಹಿರಂಗಗೊಳ್ಳಲಿವೆ ಎಂದರು. ಇನ್ನು ಧರ್ಮಸ್ಥಳದ ಧಾರ್ಮಿಕ ಸ್ಥಳದ ಬಗ್ಗೆ ಉಂಟಾಗಿರುವ ಅಪಪ್ರಚಾರದ ಕುರಿತು ಮಾತನಾಡಿದ ಶ್ರೀಗಳು, ಯಾವುದೇ ಧಾರ್ಮಿಕ ಕ್ಷೇತ್ರದ ಪಾವಿತ್ರತೆಯನ್ನು ಅಲ್ಲಿನ ವ್ಯವಸ್ಥೆಯ ಲೋಪದೋಷಗಳೊಂದಿಗೆ ಜೋಡಿಸಬಾರದು. ಕ್ಷೇತ್ರವು ಭಕ್ತರ ಶ್ರದ್ಧಾ ಕೇಂದ್ರವಾಗಿದ್ದು, ಯಾವುದೇ ಪ್ರಕರಣವಿದ್ದರೂ ಕಾನೂನು ತನ್ನ ಕರ್ತವ್ಯ ನಿರ್ವಹಿಸಲಿದೆ. ಲೋಪದೋಷಗಳಿದ್ದರೆ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದರು.

ನಾಳೆ ಸಾರಿಗೆ ಮುಷ್ಕರ:

ರಾಜ್ಯದಲ್ಲಿ ನಾಳೆ ನಡೆಯಲಿರುವ ಸಾರಿಗೆ ಮುಷ್ಕರದ ಕುರಿತು ಕೂಡ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಾರಿಗೆ ಇಲಾಖೆಯವರು ತಮ್ಮ ಬೇಡಿಕೆಗಳಿಗಾಗಿ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಅಹವಾಲು ಸಲ್ಲಿಸಿದ್ದಾರೆ. ಸರ್ಕಾರವು ಈ ಬೇಡಿಕೆಗಳನ್ನು ಪರಿಶೀಲಿಸಿ, ಸೂಕ್ತ ಪರಿಹಾರ ಒದಗಿಸುವ ವಿಶ್ವಾಸವಿದೆ ಎಂದರು

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌