
ರಾಯಚೂರು, (ಏ.30): ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ಅವರು ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ.
ಸುಯಮೀಂದ್ರ ಆಚಾರ್ ಅವರು ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಶುಕ್ರವಾರ) ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ?
ಇನ್ನು ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಮೇ 1 ರಿಂದ ಪ್ರತ್ಯಕ್ಷದರ್ಶನ ,ತೀರ್ಥಪ್ರಸಾದ ವ್ಯವಸ್ಥೆಯಿರುವುದಿಲ್ಲ. ಭಕ್ತರು ಆನ್ಲೈನ್ ಮೂಲಕ ಸೇವೆಯಲ್ಲಿ ಪಾಲ್ಗೊಳ್ಳಬಹುದು ಎಂದು ಮಠವು ಪ್ರಕಟಣೆ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ