ಮಂತ್ರಾಲಯದ ಪೀಠಾಧಿಪತಿಗಳ ʼಆಪ್ತ ಕಾರ್ಯದರ್ಶಿ ಕೊರೋನಾಗೆ ಬಲಿ

By Suvarna NewsFirst Published Apr 30, 2021, 10:30 PM IST
Highlights

  ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ. 

ರಾಯಚೂರು, (ಏ.30):  ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ಅವರು ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. 

ಸುಯಮೀಂದ್ರ ಆಚಾರ್ ಅವರು ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಶುಕ್ರವಾರ) ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ? 

ಇನ್ನು ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಮೇ 1 ರಿಂದ ಪ್ರತ್ಯಕ್ಷದರ್ಶನ ,ತೀರ್ಥಪ್ರಸಾದ ವ್ಯವಸ್ಥೆಯಿರುವುದಿಲ್ಲ. ಭಕ್ತರು ಆನ್‌ಲೈನ್ ಮೂಲಕ ಸೇವೆಯಲ್ಲಿ ಪಾಲ್ಗೊಳ್ಳಬಹುದು ಎಂದು ಮಠವು ಪ್ರಕಟಣೆ ಹೊರಡಿಸಿದೆ.

click me!