ಬೆಂಗಳೂರು: 17 ದಿನದಲ್ಲಿ 50 ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ

Kannadaprabha News   | Asianet News
Published : Aug 27, 2020, 07:42 AM ISTUpdated : Aug 27, 2020, 09:35 AM IST
ಬೆಂಗಳೂರು: 17 ದಿನದಲ್ಲಿ 50 ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ

ಸಾರಾಂಶ

ಎಚ್ಚರ ವಹಿಸಿದ್ದರೂ ತಾಯಿಯಿಂದಲೇ ಮಕ್ಕಳಿಗೆ ಸೋಂಕು| ಗರ್ಭಿಣಿಯರಿಗೆ ಕೋವಿಡ್‌ ಸೋಂಕು ತಗುಲಿದರೂ, ಜನಿಸುವ ಮಕ್ಕಳಿಗೆ ಸೋಂಕು ಹರಡುವುದಿಲ್ಲ| ಸೋಂಕಿತ ತಾಯಿ ಮಗುವಿಗೆ ಹಾಲುಣಿಸುವಾಗ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು| 

ಬೆಂಗಳೂರು(ಆ.27): ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದ್ದ ಶಿವಾಜಿನಗರದ ಎಚ್‌ಎಸ್‌ಐಎಸ್‌ ಘೋಷ ಆಸ್ಪತ್ರೆಯಲ್ಲಿ ಕಳೆದ ಹದಿನೇಳು ದಿನಗಳಲ್ಲಿ 50 ಕೋವಿಡ್‌ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸುವ ಮೂಲಕ ಮೈಲಿಗಲ್ಲು ಸಾಧಿಸಲಾಗಿದೆ ಎಂದು ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಎಚ್‌ಎಸ್‌ಐಎಸ್‌ ಘೋಷ ಆಸ್ಪತ್ರೆಯನ್ನು ಆ.10ರಂದು ಕೋವಿಡ್‌ ಆಸ್ಪತ್ರೆಯಾಗಿ ವಿಶೇಷವಾಗಿ ಕೊರೋನಾ ಸೋಂಕಿತ ಗರ್ಭಿಣಿಯರ ಹೆರಿಗಾಗಿಯೇ ಪರಿವರ್ತಿಸಲಾಗಿತ್ತು. ಕಾರ್ಯಾರಂಭಿಸಿದ ಹದಿನೇಳು ದಿನಗಳಲ್ಲೇ ಒಟ್ಟು 50 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿ ಮೈಲಿಗಲ್ಲು ಸಾಧಿಸಿರುವ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ಅವರು ಅಭಿನಂದಿಸಿದ್ದಾರೆ.

'ವದಂತಿಗಳಿಗೆ ಕಿವಿಕೊಡಬೇಡಿ, ಮಾಸ್ಕ್‌ ಧರಿಸುವುದು ಕಡ್ಡಾಯ'

ವಾಣಿವಿಲಾಸದಲ್ಲಿ 17 ಮಕ್ಕಳಿಗೆ ಸೋಂಕು: 16 ಗುಣಮುಖ

ನಗರದ ವಾಣಿವಿಲಾಸ ಆಸ್ಪತ್ರೆಯಲ್ಲಿ ಇದುವರೆಗೆ ಕೋವಿಡ್‌ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 17 ನವಜಾತ ಶಿಶುಗಳ ಪೈಕಿ 16 ಶಿಶುಗಳು ಚೇತರಿಸಿಕೊಂಡಿದ್ದರೆ ಒಂದು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಆಸ್ಪತ್ರೆಯಲ್ಲಿ ಈವರೆಗೂ 275ಕ್ಕೂ ಹೆಚ್ಚು ಕೋವಿಡ್‌ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸಲಾಗಿದೆ. 14 ಶಿಶುಗಳಿಗೆ ಕೋವಿಡ್‌ ಸೋಂಕು ತಗುಲಿತ್ತು. ಉಳಿದಂತೆ ಹೊರಗಿನಿಂದ ಸೋಂಕಿಗೆ ಒಳಗಾದ ಮೂರು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದವು. ಅವುಗಳಲ್ಲಿ 16 ಶಿಶುಗಳು ಗುಣುಮುಖವಾಗಿದೆ. ಕೇವಲ ಒಂದು ಶಿಶು ಮಾತ್ರ ಚಿಕಿತ್ಸೆ ಪಡೆಯುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಗರ್ಭಿಣಿಯರಿಗೆ ಕೋವಿಡ್‌ ಸೋಂಕು ತಗುಲಿದರೂ, ಜನಿಸುವ ಮಕ್ಕಳಿಗೆ ಸೋಂಕು ಹರಡುವುದಿಲ್ಲ. ಆದರೆ, ಸೋಂಕಿತ ತಾಯಿ ಮಗುವಿಗೆ ಹಾಲುಣಿಸುವಾಗ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಆದರೆ ಎಷ್ಟೇ ಎಚ್ಚರ ವಹಿಸಿದರೂ ಮಕ್ಕಳು ತಾಯಿಯಿಂದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ ಎಂದು ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ. ಸಹನಾ ತಿಳಿಸಿದ್ದಾರೆ. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!