ಡಿಕೆ ಶಿವಕುಮಾರ ಶೀಘ್ರ ಸಿಎಂ ಆಗಲಿ; ಅಭಿಮಾನಿಗಳ ಪ್ರಾರ್ಥನೆ

Published : May 16, 2025, 07:23 AM IST
 ಡಿಕೆ ಶಿವಕುಮಾರ ಶೀಘ್ರ ಸಿಎಂ ಆಗಲಿ;  ಅಭಿಮಾನಿಗಳ ಪ್ರಾರ್ಥನೆ

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅತಿ ಉತ್ಸಾಹದಿಂದ ಆಚರಿಸಿದರು ಕಾಂಗ್ರೆಸ್ ಮುಖಂಡ ಚೀರಣಕುಪ್ಪೆ ಮಹೇಶ್ ಹಾಗೂ ಡಿಕೆಶಿ ಅಭಿಮಾನಿಗಳು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಸಿ, ಆದಷ್ಟು ಬೇಗ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.

ಕನಕಪುರ (ಮೇ.16): ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅತಿ ಉತ್ಸಾಹದಿಂದ ಆಚರಿಸಿದರು ಕಾಂಗ್ರೆಸ್ ಮುಖಂಡ ಚೀರಣಕುಪ್ಪೆ ಮಹೇಶ್ ಹಾಗೂ ಡಿಕೆಶಿ ಅಭಿಮಾನಿಗಳು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಸಿ, ಆದಷ್ಟು ಬೇಗ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.

ನಗರಸಭಾಧ್ಯಕ್ಷೆ ಹೇಮರಾಜು ಹಾಗೂ ನಗರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರು, ಅಭಿಮಾನಿಗಳು ಒಳಕೋಟಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಿವಕುಮಾರ್ ಆರೋಗ್ಯ, ಆಯಸ್ಸು ನೀಡಿ ರಾಜ್ಯದ ಜನಸೇವೆಯನ್ನು ಮಾಡುವ ಅವಕಾಶ ದೊರಕಲಿ ಎಂದು ಶುಭ ಹಾರೈಸಿ, ನಗರಸಭೆಯ ಮುಂದೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಸರಳವಾಗಿ ಆಚರಿಸಿ ಸಾರ್ವಜನಿಕರಿಗೆ ಅನ್ನದಾನ ಏರ್ಪಡಿಸಿದ್ದರು.

ನಗರಸಭಾ ಅಧ್ಯಕ್ಷೆ ಹೇಮರಾಜು ಮಾತನಾಡಿ, ನಮ್ಮ ನೆಚ್ಚಿನ ನಾಯಕರಾದ ಡಿ ಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ, ಅವರ 63ನೇ ಹುಟ್ಟು ಹಬ್ಬದ ದಿನದಂದು ನಾಯಕರು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಡಿಕೆಶಿ @63: ಅಪ್ಪನ ನೆಚ್ಚಿನ ಹಾಡು ರಿವೀಲ್​ ಮಾಡಿ ವಿಶ್​ ಮಾಡಿದ ಮುದ್ದಿನ ಪುತ್ರಿ ಐಶ್ವರ್ಯಾ

ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್, ಮುಖಂಡ ರಾಜು, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜ್‌ ಸೇರಿದಂತೆ ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 01:
ಕನಕಪುರ ತಾಲೂಕಿನ ಹಲವು ದೇವಾಲಯಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪೂಜೆ ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ನಗರದಲ್ಲಿ 1000ಕ್ಕೂ ಅಧಿಕ ಅಪಾಯಕಾರಿ ಮರ ಪತ್ತೆ!
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ