ಬಿಎಸ್‌ವೈ, ಅಮಿತ್‌ ಶಾ ತಲೆದಂಡ ಖಚಿತ: ಎಂಬಿಪಾ

Published : Jan 17, 2019, 09:14 AM IST
ಬಿಎಸ್‌ವೈ, ಅಮಿತ್‌ ಶಾ ತಲೆದಂಡ ಖಚಿತ: ಎಂಬಿಪಾ

ಸಾರಾಂಶ

ಅಮಿತ್‌ಶಾ ಅಥವಾ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಇಬ್ಬರಲ್ಲಿ ಒಬ್ಬರ ತಲೆದಂಡ ಖಚಿತ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್‌ 

ಬೆಂಗಳೂರು[ಜ.17]: ಆಪರೇಷನ್‌ ಕಮಲ ಸಂಪೂರ್ಣ ವಿಫಲವಾಗಿದ್ದು ಬಿಜೆಪಿಯು ರಾಷ್ಟ್ರೀಯ ಮಟ್ಟದಲ್ಲಿ ಬೆತ್ತಲಾಗಿದೆ. ಈ ಬೆಳವಣಿಗೆಯಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅಥವಾ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಇಬ್ಬರಲ್ಲಿ ಒಬ್ಬರ ತಲೆದಂಡ ಖಚಿತ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್‌ ಹೇಳಿದರು.

ಬುಧವಾರ ಸಂಜೆ ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್‌ ಕಮಲ ಸಂಪೂರ್ಣ ವಿಫಲವಾಗಿದೆ. ಇವರಿಗೆ ಮಾನ ಮರ್ಯಾದೆ ಎಂಬುದು ಇದ್ದರೆ ಮತ್ತೆ ಇಂತಹ ಪ್ರಯತ್ನಕ್ಕೆ ಕೈ ಹಾಕಬಾರದು. ಆಪರೇಷನ್‌ ಕಮಲದ ಹಿಂದೆ ಅಮಿತ್‌ ಶಾ ಇದ್ದರೆ ಅಮಿತ್‌ ಶಾ ತಲೆದಂಡ ಆಗುತ್ತದೆ. ಇಲ್ಲದಿದ್ದರೆ ಬಿ.ಎಸ್‌. ಯಡಿಯೂರಪ್ಪ ತಲೆದಂಡವಾಗುತ್ತದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್‌ನ ಎಲ್ಲಾ ಶಾಸಕರೂ ನಮ್ಮ ಜತೆಯಲ್ಲೇ ಇದ್ದಾರೆ. ನಮ್ಮ ಯಾವುದೇ ಶಾಸಕರೂ ಬಿಜೆಪಿಗೆ ಹೋಗಿಲ್ಲ. ರಮೇಶ್‌ ಜಾರಕಿಹೊಳಿ, ನಾಗೇಂದ್ರ ನನ್ನ ಸ್ನೇಹಿತರು. ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗ್ಗೆ ಇಬ್ಬರೊಂದಿಗೂ ಮಾತನಾಡಿದ್ದೇನೆ. ಪಕ್ಷೇತರರೂ ನಮ್ಮೊಂದಿಗಿದ್ದು, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರೂ ಹಾಜರಾಗುತ್ತಾರೆ. ಯಾರೊಬ್ಬರೂ ಗೈರಾಗುವುದಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ