ಮತ್ತೆ ಗಲಾಟೆ ಮಾಡಿದ್ರೆ ರೌಡಿಶೀಟರ್ ಪಟ್ಟಿಗೆ: ಎಂಬಿಪಾ ವಾರ್ನಿಂಗ್

Published : Jan 24, 2019, 09:54 AM IST
ಮತ್ತೆ ಗಲಾಟೆ ಮಾಡಿದ್ರೆ ರೌಡಿಶೀಟರ್ ಪಟ್ಟಿಗೆ: ಎಂಬಿಪಾ ವಾರ್ನಿಂಗ್

ಸಾರಾಂಶ

ಆನಂದ್ ಸಿಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಣೇಶ್ ವಿರುದ್ಧ ಗೃಹ ಸಚಿವ ಎಂ. ಬಿ. ಪಾಟೀಲ್ ಗುಡುಗಿದ್ದಾರೆ.

ಬೆಂಗಳೂರು[ಜ.24]: ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಕಂಪ್ಲಿ ಶಾಸಕ ಗಣೇಸ್‌ರನ್ನು ಅಗತ್ಯ ಬಿದ್ದರೆ ರೌಡಿ ಶೀಟರ್ ಪಟ್ಟಿಗೆ ಸೇರಿಸುವ ಬಗ್ಗೆ ಪೊಲೀಸ್ ಇಸ್ಖೆಯು ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರು ತನಿಖೆ ಕೈಗೊಂಡಿದ್ದು, ಶೀಘ್ರದಲ್ಲಿಯೇ ಬಂಧಿಸಲಿದ್ದಾರೆ. ಪ್ರಕರಣ ಸಂಬಂಧ ಯಾವುದೇ ಒತ್ತಡಗಳಾಗಲಿ ಇಲ್ಲ. ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಅಲ್ಲದೇ ಈ ಹಿಂದೆ ಗಣೇಶ್ ಹೆಸರು ರೌಡಿಶೀಟರ್ ಪಟ್ಟಿಯಲ್ಲಿದ್ದು, ತರುವಾಯ ರೌಡಿ ಶೀಟರ್ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಮತ್ತೊಮ್ಮೆ ಇಂತಹ ಘಟನೆಗಳು ಜರುಗಿದರೆ ಮತ್ತೆ ರೌಡಿಶೀಟರ್ ಪಟ್ಟಿಗೆ ಸೇರಿಸುವ ಬಗ್ಗೆ ಪೊಲೀಸರು ಸೂಚನೆ ನೀಡಿದರೆ ಅದರಂತೆ ಕ್ರಮ ಜರುಗಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ