
ಬೆಂಗಳೂರು: ನಟಿ ಶ್ರುತಿ ಹರಿಹರನ್ ಅವರಿಂದ ಲೈಂಗಿಕ ಕಿರುಕುಳ (ಮೀಟೂ) ಆರೋಪಕ್ಕೆ ಒಳಗಾಗಿರುವ ನಟ ಅರ್ಜುನ್ ಸರ್ಜಾ ಸೋಮವಾರ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ರನ್ನು ಭೇಟಿಯಾದರು.
ಆಯುಕ್ತರ ಕಚೇರಿಗೆ ಬಂದಿದ್ದ ಅವರು ಆಯುಕ್ತರನ್ನು ಭೇಟಿಯಾಗಿ ಕೆಲ ನಿಮಿಷ ಚರ್ಚೆ ನಡೆಸಿದರು. ಭೇಟಿಯ ಕಾರಣ, ಚರ್ಚೆಯ ವಿವರ ಲಭ್ಯವಾಗಿಲ್ಲ.
ವಿಸ್ಮಯ ಕನ್ನಡ ಚಿತ್ರ ಶೂಟಿಂಗ್ ವೇಳೆ ತಮಗೆ ನಟ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್ ದೂರಿದ್ದರು. ಬಳಿಕ ಈ ಬಗ್ಗೆ ಪ್ರಕರಣ ದಾಖಲಾಗಿ ದೊಡ್ಡ ಮಟ್ಟದ ಸುದ್ದಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ