ಪೀಠ ತ್ಯಾಗ ಮಾಡಲು ಮುರುಘಾ ಶ್ರೀ ನಕಾರ: ಲಿಂಗಾಯತ ಮುಖಂಡರ ಸಭೆ

Published : Sep 29, 2022, 11:32 AM IST
ಪೀಠ ತ್ಯಾಗ ಮಾಡಲು ಮುರುಘಾ ಶ್ರೀ ನಕಾರ: ಲಿಂಗಾಯತ ಮುಖಂಡರ ಸಭೆ

ಸಾರಾಂಶ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚುತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾಶರಣರು ಪೀಠ ತ್ಯಜಿಸಲು ನಿರಾಕರಿಸುತ್ತಿದ್ದಾರೆ. ಇದರ ಬೆನ್ನಲ್ಲಿಯೇ ಇಂದು ಲಿಂಗಾಯತ ಮುಖಂಡರ ಸಭೆ ನಡೆಯಲಿದೆ.

ಚಿತ್ರದುರ್ಗ (ಸೆ. 29): ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿಯಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಜಿಸಲು ನಿರಾಕರಿಸಿದ್ದಾರೆ. ಇದರ ನಡುವೆ ಇಂದು ಲಿಂಗಾಯತ ಮುಖಂಡರ ಸಭೆ ನಡೆಯಲಿದೆ.ಮುರುಘಾಮಠದ ಪರಂಪರೆ ಉಳಿಸಿ ಹೆಸರಲ್ಲಿ ಚಿತ್ರದುರ್ಗದಲ್ಲಿ ಇಂದು ಲಿಂಗಾಯತ, ವೀರಶೈವ ಮುಖಂಡರ ಸಭೆ ನಡೆಯಲಿದೆ. ಮಾಜಿ ಸಚಿವ ಹೆಚ್.ಏಕಾಂತಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.  ಚಿತ್ರದುರ್ಗ ಹೊರ ವಲಯ ಸೀಬಾರದ ಬಳಿ ಇರುವ ಮಾಜಿ ಮುಖ್ಯಮಂತ್ರಿ ಎಸ್ .ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಸಭೆ ನಿಗದಿಯಾಗಿದೆ. ಮಧ್ಯಾಹ್ನ ಹನ್ನೆರೆಡು ಗಂಟೆಗೆ ಸಭೆ ಆರಂಭವಾಗಲಿದ್ದು, ಪ್ರಮುಖ ನಿರ್ಧಾರ ಮಾಡುವ ಸಾಧ್ಯತೆ ಇದೆ. ಸಭೆಯಲ್ಲಿ ಗಲಾಟೆಗಳು ಆಗುವ ಸಾಧ್ಯತೆ ಹಿನ್ನಲೆಯಲ್ಲಿ ಸಭೆಗೆ ಪೊಲೀಸ್‌ ರಕ್ಷಣೆ ಬೇಕು ಎಂದು ಅಯೋಜಕರು ಕೋರಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ