ಕೇರಳ ಸ್ಟೋರಿ ಬಳಿಕ ಲೋಕಸಭಾ ಚುನಾವಣೆ ಹೊತ್ತಲ್ಲಿ ಮೆಹಬೂಬ ತೆರೆಗೆ, ಮುಸ್ಲಿಮರ ಆಕ್ರೋಶ!

Published : Mar 14, 2024, 07:18 PM IST
ಕೇರಳ ಸ್ಟೋರಿ ಬಳಿಕ ಲೋಕಸಭಾ ಚುನಾವಣೆ ಹೊತ್ತಲ್ಲಿ ಮೆಹಬೂಬ ತೆರೆಗೆ, ಮುಸ್ಲಿಮರ ಆಕ್ರೋಶ!

ಸಾರಾಂಶ

'ದಿ ಕೇರಳ ಸ್ಟೋರಿ' ಮಾದರಿಯಲ್ಲಿ ಕರಾವಳಿಯ ನೈಜ ಘಟನೆ ಆಧರಿಸಿ 'ಮೆಹಬೂಬ' ಚಿತ್ರ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಸಿನಿಮಾ ಬಿಡುಗಡೆಗೆ ಇಂದೇ ತಡೆಯಾಜ್ಞೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರಿಗೆ ದೂರು ನೀಡಲಾಗಿದೆ.

ಮಂಗಳೂರು (ಮಾ.14): 'ದಿ ಕೇರಳ ಸ್ಟೋರಿ' ಮಾದರಿಯಲ್ಲಿ ಕರಾವಳಿಯ ನೈಜ ಘಟನೆ ಆಧರಿಸಿ 'ಮೆಹಬೂಬ' ಚಿತ್ರ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಸಿನಿಮಾ ಬಿಡುಗಡೆಗೆ ಇಂದೇ ತಡೆಯಾಜ್ಞೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರಿಗೆ ದೂರು ನೀಡಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಆಲ್ ಕಾಲೇಜ್ ಸ್ಟುಡೆಂಟ್ ಅಸೋಸಿಯೇಶನ್ ಅಧ್ಯಕ್ಷ ಬಾತೀಷ್, ಲೋಕಸಭಾ ಚುನಾವಣೆ ಲಾಭ ಪಡೆಯಲು 'ದಿ ಕೇರಳ ಸ್ಟೋರಿ' ಮಾದರಿಯಲ್ಲಿ 'ಮೆಹಬೂಬ' ಸಿನಿಮಾ ಬಿಡುಗಡೆ ಮಾಡುವ ಮೂಲಕ ಮುಸ್ಲಿಂ ಯುವತಿಯರು ಸೇರಿದಂತೆ ಯುವ ಸಮೂಹದ ದಾರಿ ತಪ್ಪಿಸುವ ಸಾಧ್ಯತೆ ಇದೆ. ಹೀಗಾಗಿ ತಕ್ಷಣ ವೇಳೆ ಬಿಡುಗಡೆಗೆ ತಡೆ ನೀಡಬೇಕು. ನಮ್ಮ ವಕೀಲರು ತಡೆಯಾಜ್ಞೆ ತರಲು ಇಂದು ಯತ್ನಿಸುತ್ತಿದ್ದಾರೆಕ. ನಮ್ಮ ವಿರೋಧದ ನಡುವೆಯೂ ಸಿನಿಮಾ ಬಿಡುಗಡೆ ಮಾಡಿದರೆ ಅದರ ಪರಿಣಾಮ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದ್ದಾರೆ.

ಪುನೀತ್ ರಾಜ್‌ಕುಮಾರ್ 'ಜಾಕಿ' ಫೈಟ್‌ ಬಗ್ಗೆ ವಿವಾದ; ರವಿ ವರ್ಮ ವಿರುದ್ಧ ಪೊಲೀಸ್ ಕಂಪ್ಲೇಂಟ್

ಲೋಕಸಭಾ ಚುನಾವಣೆಯ ಲಾಭ ಪಡೆಯಲು ಬಿಜೆಪಿಯ ಬೆಂಬಲಿಗರೇ ಈ ಸಿನಿಮಾ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಈ ಚಿತ್ರ ಬಿಡುಗಡೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ, ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

 

ಮದುವೆಗಾಗಿ ಧರ್ಮವನ್ನೇ ಬಿಟ್ರು, ಆದ್ರೆ ಡಿವೋರ್ಸ್ ಆಯ್ತು; ಸ್ಟಾರ್ ನಟಿ ಬದುಕು ದುರಂತದಲ್ಲಿ ಕೊನೆಯಾಯ್ತು!

ಮಂಗಳೂರಿನಲ್ಲಿ ಹಿಂದುತ್ವ ಜಿಹಾದ್‌ಗೆ ಬಲಿಯಾದ ನಿಜ ಜೀವನದ ಕತೆಯನ್ನು 'ಮೆಹಬೂಬ' ಎಂಬ ಹೆಸರಿನಲ್ಲಿ ಕನ್ನಡ ಚಿತ್ರತಂಡ ಸಿನಿಮಾ ನಿರ್ಮಾಣ ಮಾಡಿದೆ.  ಮಾ.15ರಂದು ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ ಆದರೆ ಈ ಸಿನಿಮಾ ಮುಸ್ಲಿಂ ಯುವತಿಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ರಾಜ್ಯ ಸರ್ಕಾರ ಕೂಡಲೇ ಬಿಡುಗಡೆಗೆ ತಡೆ ನೀಡುವಂತೆ ಟ್ವಿಟ್ಟರ್ ಎಕ್ಸ್‌ನಲ್ಲಿ Bathish Alakemajalu ಎಂಬುವವರು ಪೋಸ್ಟ್ ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: ಸಿಎಂ ಬಗ್ಗೆ ಸಚಿವ ಬೈರತಿ ಸುರೇಶ್ ಗುಣಗಾನ