ಮೇಕೆದಾಟು ವಿಷಯದಲ್ಲಿ ತಮಿಳುನಾಡು ಪರ : ಅಣ್ಣಾಮಲೈ

Kannadaprabha News   | Asianet News
Published : Jul 16, 2021, 07:02 AM IST
ಮೇಕೆದಾಟು ವಿಷಯದಲ್ಲಿ ತಮಿಳುನಾಡು ಪರ :  ಅಣ್ಣಾಮಲೈ

ಸಾರಾಂಶ

ಮೇಕೆದಾಟು ಡ್ಯಾಂ ವಿಷಯವಾಗಿ ತಮಿಳುನಾಡು ಬಿಜೆಪಿ ಘಟಕ ಸರ್ಕಾರದ ಪರ ನಿಲ್ಲುತ್ತದೆ ನೂತನ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಣ್ಣಾಮಲೈ ಗುರುವಾರ ಹೇಳಿಕೆ

ತಿರುಚ್ಚಿ (ಜು.16): ಮೇಕೆದಾಟು ಡ್ಯಾಂ ವಿಷಯವಾಗಿ ತಮಿಳುನಾಡು ಬಿಜೆಪಿ ಘಟಕ ಸರ್ಕಾರದ ಪರ ನಿಲ್ಲುತ್ತದೆ ಎಂದು ನೂತನ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಣ್ಣಾಮಲೈ ಗುರುವಾರ ಹೇಳಿಕೆ ನೀಡಿದ್ದಾರೆ.

ತಿರುಚ್ಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಷಯವಾಗಿ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ನಾವು ಈ ವಿಷಯವಾಗಿ ರಾಜಕೀಯ ಮಾಡಲು ಬಯಸುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದ ಸರ್ಕಾರವಿದ್ದರೂ, ತಮಿಳುನಾಡು ಬಿಜೆಪಿ ತಮಿಳುನಾಡು ಜನರು ಮತ್ತು ರೈತರ ಹಿತಾಸಕ್ತಿಯ ಪರವಾಗಿ ಕಾರ್ಯನಿರ್ವಹಿಸಲಿದೆ. ತಮಿಳುನಾಡು ರೈತರಿಗೆ ಯಾವುದೇ ಸಮಸ್ಯೆಯನ್ನು ಎದುರಿಸಬಾರದು. ಸುಪ್ರೀಂಕೋರ್ಟ್‌ ಆದೇಶದಂತೆ ರಾಜ್ಯ ತನ್ನ ಪಾಲಿನ ಕಾವೇರಿ ನೀರನ್ನು ಪಡೆಯಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಸ್ಯೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಪಾತ್ರ ನಿಭಾಯಿಸುತ್ತೀರಾ ಎಂದು ಕೇಳಲಾದ ಪ್ರಶ್ನೆಗೆ, ಎಲ್ಲಾ ಪಕ್ಷಗಳು ಈ ವಿಷಯವಾಗಿ ಸಂಘಟಿತ ತೀರ್ಮಾನ ಕೈಗೊಳ್ಳಲಿವೆ. ಅದಕ್ಕೆ ತಾವೂ ಬದ್ಧವಾಗಿರುವುದಾಗಿ ಹೇಳಿದ್ದಾರೆ.

ಚುನಾವಣೆಯಲ್ಲಿ ಸೋತು ನಿರಾಸೆಯಲ್ಲಿದ್ದ ಅಣ್ಣಾಮಲೈಗೆ ಒಲಿದು ಬಂತು ಮಹತ್ವದ ಹುದ್ದೆ

ಮೇಕೆದಾಟು ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿ ಆಗಲಿರುವ ಸರ್ವಪಕ್ಷ ನಿಯೋಗದಲ್ಲಿ ಬಿಜೆಪಿ ಮುಖಂಡರು ಕೂಡ ಭಾಗಿಯಾಗಲಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಅವರು ಕರ್ನಾಟಕದಲ್ಲಿ ಐಪಿಎಸ್‌ ಅಧಿಕಾರಿಯಾಗಿ ಹೆಸರು ಮಾಡಿದ್ದರು. ಬಳಿಕ ಅವರು ಪೊಲೀಸ್‌ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ