ಮೇಕೆದಾಟು ಯೋಜನೆ: ಎನ್‌ಜಿಟಿಯಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್

Published : Jun 18, 2021, 07:34 PM ISTUpdated : Jun 18, 2021, 08:32 PM IST
ಮೇಕೆದಾಟು ಯೋಜನೆ: ಎನ್‌ಜಿಟಿಯಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್

ಸಾರಾಂಶ

* ಹಸಿರು ನ್ಯಾಯ ಮಂಡಳಿಯಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್  * ಕರ್ನಾಟಕ ವಿರುದ್ಧದ ಅರ್ಜಿಯನ್ನು ಇತ್ಯರ್ಥ * ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ಇದ್ದ ವಿವಾದಕ್ಕೆ ತೆರೆ

ಬೆಂಗಳೂರು, (ಜೂನ್.18): ರಾಜ್ಯದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT)ಯಿಂದ ಬಿಗ್ ರಿಲೀಫ್ ಸಿಕ್ಕಿದೆ.

ಅನುಮತಿ ಇಲ್ಲದೇ ಕಾಮಗಾರಿ ಶುರು ಮಾಡಲಾಗಿದೆ ಎಂದು ಪತ್ರಿಕಾ ವರದಿ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು. ಇದನ್ನ ಅವಲೋಕಿಸಿದ ಎನ್‌ಜಿಟಿ, ಕರ್ನಾಟಕ ವಿರುದ್ಧದ ಅರ್ಜಿಯನ್ನು ಇತ್ಯರ್ಥಗೊಳಿಸಿದೆ. ಇದರಿಂದ ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ.

"

ಮೇಕೆದಾಟು ಅಣೆಕಟ್ಟು: ಜಂಟಿ ಸಮಿತಿ ರಚಿಸಿದ ಹಸಿರು ನ್ಯಾಯ ಪೀಠ

ಮೇಕೆದಾಟು ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಮಾಧ್ಯಮಗಳ ವರದಿ ಪ್ರಕಟ ಮಾಡಿತ್ತು. ಈ ಯೋಜನೆ ಅನುಷ್ಠಾನಗೊಳಿಸಲು ಕರ್ನಾಟಕವು ಅಪಾರ ಪ್ರಮಾಣದ ಸಸ್ಯ ಸಂಪತ್ತನ್ನು ನಾಶ ಮಾಡುತ್ತದೆ ಎಂದು ಅದರಲ್ಲಿ ಉಲ್ಲೇಖವಾಗಿತ್ತು. ಇದನ್ನು ನೋಡಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಸ್ವಯಂ ಪ್ರೇರಿತವಾಗಿ (ಸುವೋ ಮೋಟೋ) ದೂರು ದಾಖಲಿಸಿಕೊಂಡಿತ್ತು.

 ಯೋಜನೆ ಸ್ಥಳದಲ್ಲಿ ಕಾಮಗಾರಿ ಆರಂಭಿಸಿಲ್ಲ. ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶವಿಲ್ಲ ಎಂದು ಕರ್ನಾಟಕದ ಪರವಾಗಿ ವಾದ ಮಂಡಿಸಲಾಯಿತು. ವಾದ ಅಲಿಸಿದ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪ್ರಧಾನ ಪೀಠ, ಕರ್ನಾಟಕ ವಿರುದ್ಧದ ಅರ್ಜಿಯನ್ನು ಇತ್ಯಾರ್ಥ ಮಾಡಿದೆ. 

ಮೇಕೆದಾಟು;  ಕಾನೂನು ಹೋರಾಟ ಮತ್ತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ
ಇನ್ನು ಈ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದು,  ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ರಾಷ್ಟ್ರೀಯ ಹಸಿರು ಪೀಠದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಈ ಯೋಜನೆಯ ಅನುಷ್ಠಾನದ ಮೂಲಕ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳ ಜನತೆಗೆ ಕುಡಿಯುವ ನೀರು ಪೂರೈಸಲು ನೆರವಾಗಲಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್