
ಬೆಂಗಳೂರು(ಜ.05): ಅನಾರೋಗ್ಯಕ್ಕೀಡಾಗಿದ್ದ ಸ್ನೇಹಿತನ ಚಿಕಿತ್ಸೆಗಾಗಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿ.ವಿ.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ಮಳವಳ್ಳಿ ಮೂಲದ ಮಂಜುನಾಥ್ ಮತ್ತು ಮೈಸೂರಿನ ನರಸೀಪುರ ನಿವಾಸಿ ಮರಿಸ್ವಾಮಿ ಬಂಧಿತರು. ಆರೋಪಿಗಳಿಂದ ಒಂದು ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಇತ್ತೀಚೆಗೆ ವಿವಿಪುರಂನ ಸಜ್ಜನ್ರಾವ್ ರಸ್ತೆ ಬಳಿ ಆರೋಪಿಗಳಿಬ್ಬರು ಅನುಮಾನಾಸ್ಪದವಾಗಿ ನಿಂತಿದ್ದರು. ಇದೇ ವೇಳೆ ಗಸ್ತಿನಲ್ಲಿದ್ದ ಎಎಸ್ಐ ಶಿವಕುಮಾರ್ ವಿಚಾರಣೆ ನಡೆಸಿದ್ದು, ಗೊಂದಲದ ಹೇಳಿಕೆ ನೀಡಿದ್ದರು.
ಏಪ್ರಿಲ್ನಿಂದ ಮತ್ತಷ್ಟು ತೆರಿಗೆ ಭಾರ: ಶೇ.2ರಷ್ಟು ಹೊಸದಾಗಿ ಭೂ ಸಾರಿಗೆ ಉಪ ಕರ
ಅನುಮಾನಗೊಂಡು ಠಾಣೆಗೆ ಕರೆದೊಯ್ದು ಪ್ರಶ್ನಿಸಿದಾಗ ಸ್ನೇಹಿತ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಆತನ ಚಿಕಿತ್ಸೆಗಾಗಿ ಸರಗಳ್ಳತನ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದರು. ಆದರೆ, ಈ ಬಗ್ಗೆ ಯಾವುದೇ ದಾಖಲೆಗಳು ಇಲ್ಲ
ಚಾಮರಾಜನಗರ ಜಿಲ್ಲೆಯಲ್ಲಿ ಚಿನ್ನದ ಸರ ಕಳವು ಮಾಡಿ, ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದರು ಎಂಬುದು ಗೊತ್ತಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ