ಕಂಟೈನ್‌ಮೆಂಟ್‌ ಝೋನ್‌ನಲ್ಲಿ ಮೆಟ್ರೋ ರೈಲು ನಿಲ್ಲಲ್ಲ

Kannadaprabha News   | Asianet News
Published : Sep 04, 2020, 10:21 AM IST
ಕಂಟೈನ್‌ಮೆಂಟ್‌ ಝೋನ್‌ನಲ್ಲಿ ಮೆಟ್ರೋ ರೈಲು ನಿಲ್ಲಲ್ಲ

ಸಾರಾಂಶ

ಯಾವುದೇ ಮೆಟ್ರೋ ನಿಲ್ದಾಣವು ಕಂಟೈನ್‌ಮೆಂಟ್‌ ವಲಯದ ವ್ಯಾಪ್ತಿಗೆ ಬಂದರೆ ಅಂತಹ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ತೆರೆಯುವುದಿಲ್ಲ| ಪ್ರಯಾಣಿಕರು ಸಮೀಪದ ಮೆಟ್ರೋ ನಿಲ್ದಾಣವನ್ನು ರೈಲು ಹತ್ತಲು ಮತ್ತು ಇಳಿಯಲು ಉಪಯೋಗಿಸಬೇಕು ಎಂದು ಸ್ಪಷ್ಟಪಡಿಸಿದ ಮೆಟ್ರೋ ನಿಗಮ|   

ಬೆಂಗಳೂರು(ಸೆ.04):ಕೋವಿಡ್‌-19 ಲಾಕ್‌ಡೌನ್‌ ಸಡಿಲಿಕೆ ಹಿನ್ನೆಲೆಯಲ್ಲಿ ಸೆ.7 ರಿಂದ ಮೆಟ್ರೋ ರೈಲು ಸಂಚಾರ ಆರಂಭವಾದರೂ ಕೂಡ ಕಂಟೈನ್‌ಮೆಂಟ್‌ ವ್ಯಾಪ್ತಿಯ ಮೆಟ್ರೋ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಇಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್‌) ತಿಳಿಸಿದೆ.

ಗುರುವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ಮೆಟ್ರೋ ನಿಗಮ, ಯಾವುದೇ ಮೆಟ್ರೋ ನಿಲ್ದಾಣವು ಕಂಟೈನ್‌ಮೆಂಟ್‌ ವಲಯದ ವ್ಯಾಪ್ತಿಗೆ ಬಂದರೆ ಅಂತಹ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ತೆರೆಯುವುದಿಲ್ಲ. ಪ್ರಯಾಣಿಕರು ಸಮೀಪದ ಮೆಟ್ರೋ ನಿಲ್ದಾಣವನ್ನು ರೈಲು ಹತ್ತಲು ಮತ್ತು ಇಳಿಯಲು ಉಪಯೋಗಿಸಬೇಕು ಎಂದು ಸ್ಪಷ್ಟಪಡಿಸಿದೆ.

1 ಮೆಟ್ರೋದಲ್ಲಿ 400 ಜನರಷ್ಟೇ ಪ್ರಯಾಣ: ಟಿಕೆಟ್‌ ಇಲ್ಲ; ಸ್ಮಾರ್ಟ್‌ಕಾರ್ಡ್‌ ಕಡ್ಡಾಯ

* ಟೋಕನ್‌ ಮಾರಾಟ ನಿಷೇಧವಿರುವ ಕಾರಣ ಸ್ಮಾರ್ಟ್‌ಕಾರ್ಡ್‌ ಕಡ್ಡಾಯ
* ಸ್ಮಾರ್ಟ್‌ಕಾರ್ಡ್‌ಗಳನ್ನು ಗೇಟ್‌ ರೀಡರ್‌ನಿಂದ 3 ಸೆಂ.ಮೀ ದೂರದಿಂದ ಪ್ರಸ್ತುತ ಪಡಿಸಬೇಕು
* ದೇಹದ ತಾಪಮಾನ 37 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇದ್ದರಷ್ಟೇ ನಿಲ್ದಾಣ ಪ್ರವೇಶಿಸಕ್ಕೆ ಅನುಮತಿ
* ಕೊರೋನಾ ಸೋಂಕಿನ ಲಕ್ಷಣ ಇರುವ ಪ್ರಯಾಣಿಕರಿಗೆ ಅನುಮತಿ ನಿರಾಕರಣೆ
* ರೈಲಿನ ಒಳಗೆ ಗುರುತಿಸಿದ ಆಸನಗಳಲ್ಲಿ ಮಾತ್ರ ಕೂರಬೇಕು, ನಿಲ್ಲಬೇಕು
* ನಿಲ್ದಾಣಗಳ ಸಮೀಪ ಪ್ರಯಾಣಿಕರ ವಾಹನ ನಿಲುಗಡೆಗೆ ಅನುಮತಿ
* ನಿಲ್ದಾಣಗಳಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ನಿಲ್ಲವಂತಿಲ್ಲ
* ಅಗತ್ಯವಿದ್ದರೆ ಮಾತ್ರ 65 ವರ್ಷ ಮೇಲ್ಪಟ್ಟ, 10 ವರ್ಷದ ಒಳಗಿನವರಿಗೆ ಅವಕಾಶ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!