ಇಂದಿನಿಂದ ಹಸಿರು ಮಾರ್ಗದಲ್ಲೂ ಮೆಟ್ರೋ ಸಂಚಾರ

Kannadaprabha News   | Asianet News
Published : Sep 09, 2020, 08:13 AM IST
ಇಂದಿನಿಂದ ಹಸಿರು ಮಾರ್ಗದಲ್ಲೂ ಮೆಟ್ರೋ ಸಂಚಾರ

ಸಾರಾಂಶ

ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ನಮ್ಮ ಮೆಟ್ರೋ ರೈಲು ಐದು ತಿಂಗಳ ಬಳಿಕ ಸಂಚಾರ ಆರಂಭ| ಮೊದಲ ದಿನ ಪ್ರಯಾಣಿಕರಿಂದ ನಿರಸ ಪ್ರತಿಕ್ರಿಯೆ| ಎರಡನೇ ದಿನವಾದ ಮಂಗಳವಾರ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ|  ಬಿಎಂಆರ್‌ಸಿಎಲ್‌ಗೆ ಒಟ್ಟು 1.85 ಲಕ್ಷ ರು. ಆದಾಯ| 

ಬೆಂಗಳೂರು(ಸೆ.09): ಕೋವಿಡ್‌ ಸೋಂಕು ಹರಡುವುದನ್ನು ತಡೆಯಲು ಕೆಲವು ನಿರ್ಬಂಧಗಳೊಂದಿಗೆ ನೇರಳೆ ಮಾರ್ಗದಲ್ಲಿ ಮಾತ್ರ ರೈಲು ಸಂಚಾರ ಆರಂಭಿಸಿದ್ದ ನಮ್ಮ ಮೆಟ್ರೋ ಇಂದಿನಿಂದ(ಬುಧವಾರ) ಹಸಿರು ಮಾರ್ಗದಲ್ಲೂ ಸಂಚಾರ ಆರಂಭಿಸಲಿದೆ.

ಬೈಯಪ್ಪನಹಳ್ಳಿ- ಮೈಸೂರು ರಸ್ತೆ ಮೆಟ್ರೋ ಮಾರ್ಗದ ನಡುವೆ ಹಿಂದಿನಂತೆ ಬೆಳಗ್ಗೆ 8 ರಿಂದ 11 ಮತ್ತು ಸಂಜೆ 4.30ರಿಂದ 7.30ರವರೆಗೆ ಮೆಟ್ರೋ ರೈಲು ಸಂಚರಿಸಲಿದೆ. ಹಸಿರು ಮಾರ್ಗದಲ್ಲಿ ಸೆ.10ರವರೆಗೆ ನಾಗಸಂದ್ರ- ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಬೆಳಗ್ಗೆ 8 ರಿಂದ 11 ಮತ್ತು ಸಂಜೆ 4.30ರಿಂದ 7.30ರವರೆಗೆ ರೈಲು ಸಂಚರಿಸಲಿದೆ. ಸೆ.11 ರಿಂದ ಎರಡು ಮಾರ್ಗದಲ್ಲಿಯೂ ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ರೈಲುಗಳು ಕಾರ್ಯಾಚರಣೆ ನಡೆಸಲಿವೆ.

ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಪ್ರವೇಶ;  ರೀಚಾರ್ಜ್‌ ಮಾಡಲು ಪರದಾಟ!

ಪ್ರಯಾಣಿಕರ ಸಂಖ್ಯೆ ಹೆಚ್ಚಳ: 

ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ನಮ್ಮ ಮೆಟ್ರೋ ರೈಲು ಐದು ತಿಂಗಳ ಬಳಿಕ ಸೋಮವಾರ ಸಂಚಾರ ಆರಂಭಿಸಿದ್ದು, ಮೊದಲ ದಿನ ಪ್ರಯಾಣಿಕರಿಂದ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಎರಡನೇ ದಿನವಾದ ಮಂಗಳವಾರ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು ಬೆಳಗ್ಗೆ 8ರಿಂದ 11ರವರೆಗೆ 2303 ಮತ್ತು ಸಂಜೆ 4.30ರಿಂದ 7.30ರವರೆಗೆ 2728 ಸೇರಿ ಒಟ್ಟು 5031 ಪ್ರಯಾಣಿಸಿದ್ದಾರೆ. ಹೀಗಾಗಿ ಬಿಎಂಆರ್‌ಸಿಎಲ್‌ಗೆ ಒಟ್ಟು 1.85 ಲಕ್ಷ ರು. ಆದಾಯ ಬಂದಿದೆ.

ಬುಧವಾರದಿಂದ ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲುಗಳು ಸಂಚಾರ ನಡೆಸಲಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಬಿಎಂಆರ್‌ಸಿಎಲ್‌ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!