ತಮಿಳನಾಡು ಮಾದರಿಯಲ್ಲಿ ಕರ್ನಾಟಕದಲ್ಲೂ ಹಾಲಿನ ದರ ಹೆಚ್ಚಳ: ಸಿಎಂ ಮಹತ್ವದ ಸುಳಿವು! ಹೇಳಿದ್ದೇನು?

Kannadaprabha News   | Kannada Prabha
Published : Sep 20, 2026, 06:47 AM IST
DK Shivakumar on milk price hike

ಸಾರಾಂಶ

ತಮಿಳುನಾಡಿನಲ್ಲಿ ಹಾಲಿನ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ದರ ಏರಿಕೆಗೆ ರೈತರು ಒತ್ತಾಯಿಸುತ್ತಿದ್ದಾರೆ. ಬರಗಾಲದಿಂದಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದ್ದು, ಗಡಿಭಾಗದ ರೈತರು ತಮಿಳುನಾಡಿಗೆ ಹಾಲು ಪೂರೈಸುತ್ತಿದ್ದಾರೆ. ಈ ಕುರಿತು ಶೀಘ್ರವೇ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಚಿಕ್ಕಮಗಳೂರು (ಸೆ.20): ತಮಿಳುನಾಡಿನಲ್ಲಿ ಹಾಲಿನ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ರೈತರು ಕೂಡ ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದು, ಈ ಕುರಿತು ಶೀಘ್ರವೇ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ತಮಿಳನಾಡು ಮಾದರಿ ಹಾಲಿನ ದರ ಹೆಚ್ಚಳ

ಶನಿವಾರ ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಹಾಲಿನ ದರವನ್ನು ಲೀಟರ್‌ಗೆ ₹9ರಿಂದ ₹10ರವರೆಗೆ ಹೆಚ್ಚಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹುಲ್ಲು, ಹಿಂಡಿ ಹಾಗೂ ಭೂಸಾ ದರ ಹೆಚ್ಚಳವಾಗಿದ್ದು, ಹಾಲು ಉತ್ಪಾದನಾ ವೆಚ್ಚವೂ ಏರಿಕೆಯಾಗಿದೆ. ರಾಜ್ಯದ ಹಾಲು ಉತ್ಪಾದಕರ ಸಂಘಗಳಿಗೂ ಲೀಟರ್‌ಗೆ ₹6ರಿಂದ ₹7ರಷ್ಟು ನಷ್ಟವಾಗುತ್ತಿದೆ. ಕನಿಷ್ಠ ತಮಿಳುನಾಡಿನ ಮಾದರಿಯಲ್ಲಿ ಹಾಲಿನ ದರ ಹೆಚ್ಚಳ ಮಾಡಬೇಕೆಂಬ ಒತ್ತಾಯವಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಹಾಲಿನ ಉತ್ಪಾದನೆ ಕಡಿಮೆ

ಈ ಬಾರಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆ ಸ್ಥಗಿತಗೊಂಡಿವೆ. ಇದರೊಂದಿಗೆ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾಗಿದೆ. ಗಡಿಭಾಗದ ರೈತರು ಹೆಚ್ಚಿನ ದರ ಸಿಗುತ್ತಿರುವ ಕಾರಣ ತಮಿಳುನಾಡಿನ ಡೈರಿಗಳಿಗೆ ಹಾಲು ಪೂರೈಸುತ್ತಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲಕ್ಷಾಂತರ ಕಾರ್ಮಿಕರಿಗೆ ಹೈಕೋರ್ಟ್ ಸಿಹಿ ಸುದ್ದಿ: ಪರಿಷ್ಕೃತ ಕನಿಷ್ಠ ವೇತನ ತಡೆಹಿಡಿದಿದ್ದ ಇಲಾಖಾ ಸುತ್ತೋಲೆಗಳಿಗೆ ತಡೆ!
ಸಚಿವ ಸತೀಶ್ ಜಾರಕಿಹೊಳಿ ಇಡಿ ದಾಳಿ ಪ್ರಕರಣ: 3000 ಕೋಟಿಯ ಮೂರು PWD ಟೆಂಡರ್‌ನಿಂದ ಕಿಕ್‌ಬ್ಯಾಕ್ ಆರೋಪ