ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿಮಾಲ್ಟ್: ಸಚಿವ ಮಧು ಬಂಗಾರಪ್ಪ

Published : Feb 08, 2024, 07:23 AM IST
ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿಮಾಲ್ಟ್: ಸಚಿವ ಮಧು ಬಂಗಾರಪ್ಪ

ಸಾರಾಂಶ

ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ ನೀಡಲಾಗುತ್ತಿದೆ. ಆರು ದಿನ ಕ್ಷೀರ ಭಾಗ್ಯ ಹಾಲು ನೀಡಲು ಕ್ರಮ ವಹಿಸಲಾಗಿದೆ. ಈಗ ಮೂರು ದಿನ ಹಾಲಿಗೆ ರಾಗಿಮಾಲ್ಟ್ ಮಿಕ್ಸ್ ಮಾಡಿ ನೀಡಲು ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಮೈಸೂರು (ಫೆ.08): ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ ನೀಡಲಾಗುತ್ತಿದೆ. ಆರು ದಿನ ಕ್ಷೀರ ಭಾಗ್ಯ ಹಾಲು ನೀಡಲು ಕ್ರಮ ವಹಿಸಲಾಗಿದೆ. ಈಗ ಮೂರು ದಿನ ಹಾಲಿಗೆ ರಾಗಿಮಾಲ್ಟ್ ಮಿಕ್ಸ್ ಮಾಡಿ ನೀಡಲು ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಕ್ಕಳಿಗೆ ರಾಗಿ ಮಾಲ್ಟ್ ಮಿಕ್ಸ್ ನೀಡುವ ಸಂಬಂಧ ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ)ಯಿಂದ ಪರೀಕ್ಷೆ ಮಾಡಿಸಲಾಗಿದ್ದು, ಮಕ್ಕಳಿಗೆ ನೀಡಬಹುದೆಂಬ ವರದಿ ಬಂದಿದೆ. ಹೀಗಾಗಿ, ಶೀಘ್ರದಲ್ಲೇ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲಾಗುವುದು ಎಂದರು.

ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ನವೆಂಬರ್‌ನಿಂದ ಪೂರೈಸಲಾಗುತ್ತಿದೆ. ಇದರಿಂದ ಶಾಲೆಗಳಲ್ಲಿ ಮುಕ್ತವಾಗಿ ಎಲ್ಲಾ ವ್ಯವಸ್ಥೆ ಬಳಸಿಕೊಳ್ಳಬಹುದು. ಎಷ್ಟೋ ಶಾಲೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ. ಉಚಿತವಾಗಿ ವಿದ್ಯುತ್ ಹಾಗೂ ನೀರು ನೀಡಿದ ಮೇಲೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಿದೆ. ಎಷ್ಟೋ ಶಾಲೆಗಳು ವಿದ್ಯುತ್ ಬಿಲ್‌ಗೆ ಹೆದರಿ ಕಂಪ್ಯೂಟರ್ ಬಳಸುತ್ತಿಲ್ಲ. ಆದರೆ, ಈಗ ಕಂಪ್ಯೂಟರ್ ಬಳಕೆ ಹೆಚ್ಚಾಗಿದೆ ಎಂದು ಅವರು ತಿಳಿಸಿದರು.ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುತ್ತೇವೆ. ಒಮ್ಮೆ ಫೇಲಾದ ನಂತರ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಪಾಸಾಗುವವರಿಗೆ ಮಾರ್ಕ್ಸ್ ಕಾರ್ಡ್ ನೀಡುವಾಗ ಸಪ್ಲಿಮೆಂಟರಿ ಎಂದು ನಮೂದಿಸುವುದಿಲ್ಲ. ಮಕ್ಕಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮಾಡಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

500 ಶಾಲೆಗಳು ಮೇಲ್ದರ್ಜೆಗೆ: ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗೆ ಹೆಚ್ಚಿನ ಬೇಡಿಕೆ ಇದೆ. ಈಗಾಗಲೇ 300 ಶಾಲೆಗಳಿದ್ದು, ಮುಂದಿನ ವರ್ಷ ಸಿಎಸ್ಆರ್ ಅನುದಾನದಲ್ಲಿ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ, ರಾಜ್ಯದಲ್ಲಿ 6 ಸಾವಿರ ಗ್ರಾಪಂಗಳಿದ್ದು, ಮುಂದಿನ 3 ವರ್ಷಗಳಲ್ಲಿ ಎರಡು ಗ್ರಾಪಂಗಳಿಗೆ ಒಂದರಂತೆ ಒಟ್ಟು 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ಯೋಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಮಕ್ಕಳಲ್ಲಿ ಕೋಮುವಾದಿ ವಿಷ ತುಂಬುವ ಚಾಳಿ ಬಿಜೆಪಿಯದ್ದು: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆ ಇದೆ. ಹೀಗಾಗಿ, 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಪಾಠ ಮಾಡಿಸಲಾಗುತ್ತಿದೆ. ಇತ್ತೀಚೆಗೆ 12500 ಶಿಕ್ಷಕರನ್ನು ನೇಮಿಸಲಾಗಿದ್ದು, ಅವರು ಪಾಠ ಮಾಡುತ್ತಿದ್ದಾರೆ. ಇನ್ನೂ 20 ಸಾವಿರ ಶಿಕ್ಷಕರ ನೇಮಕಾತಿಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು 10 ಸಾವಿರ ಶಿಕ್ಷಕರ ನೇಮಕಾತಿಗೆ ಅವಕಾಶ ನೀಡುವ ನಿರೀಕ್ಷೆ ಇದೆ.
- ಮಧು ಬಂಗಾರಪ್ಪ, ಶಿಕ್ಷಣ ಸಚಿವರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!