ಗಂಧದ ಮರ ಕಡಿದ್ರೆ ಕನಿಷ್ಠ 50 ಸಾವಿರ ದಂಡ: ಹೈಕೋರ್ಟ್ ಆದೇಶ

Published : Jul 18, 2024, 09:58 AM ISTUpdated : Jul 18, 2024, 12:04 PM IST
ಗಂಧದ ಮರ ಕಡಿದ್ರೆ ಕನಿಷ್ಠ 50 ಸಾವಿರ ದಂಡ: ಹೈಕೋರ್ಟ್ ಆದೇಶ

ಸಾರಾಂಶ

ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್, ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿರುವ ಜೊತೆಗೆ ಐದು ವರ್ಷ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ.   

ಬೆಂಗಳೂರು (ಜು.18): ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್, ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿರುವ ಜೊತೆಗೆ ಐದು ವರ್ಷ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ. ಪ್ರಕರಣದ ಆರೋಪಿ ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ನಿವಾಸಿ ದೇವರಾಜಾಚಾರಿ ಎಂಬುವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ, 10 ಸಾವಿರ ರು. ದಂಡ ವಿಧಿಸಿರುವುದನ್ನು ಆಕ್ಷೇಪಿಸಿ ಸರ್ಕಾರ ರಾಜ್ಯ (ಅಶೋಕಪುರ ಠಾಣಾ ಪೊಲೀಸರು) ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. 

ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರ ನ್ಯಾಯಪೀಠ, ಗಂಧದ ಮರ ಕಳವು ಆರೋಪ ಹಾಗೂ ಅಕ್ರಮವಾಗಿ ಸಂಗ್ರಹಿಸಿದ ಅಪರಾಧ ಮೊದಲ ಬಾರಿ ಸಾಬೀತಾದಲ್ಲಿ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತಲೂ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯ್ದೆ-1963ರ ಸೆಕ್ಷನ್ 86 ಮತ್ತು 87ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ವಿಚಾರಣಾ ನ್ಯಾಯಾಲಯ ಆರೋಪಿಗೆ ಸೆಕ್ಷನ್ 86 (ಗಂಧದ ಮರ ಕತ್ತರಿಸಿದ) ಅಡಿಯಲ್ಲಿ 5 ವರ್ಷ ಶಿಕ್ಷೆ ಹಾಗೂ ಕೇವಲ 10 ಸಾವಿರ ರು. ದಂಡ ವಿಧಿಸಿದೆ. 

ಸೆಕ್ಷನ್ 87 (ಗಂಧದ ಮರ ಸಂಗ್ರಹಣೆ ಯತ್ನ) ಅಡಿಯಲ್ಲಿ ಐದು ವರ್ಷ ಜೈಲು ವಿಧಿಸಿದ್ದರೂ ಯಾವುದೇ ದಂಡ ವಿಧಿಸಿಲ್ಲ ಎಂದು ಅಭಿಪ್ರಾಯಪಟ್ಟಿತು. ಅಲ್ಲದೆ, ಸೆಕ್ಷನ್ ಮತ್ತು 86 ಮತ್ತು 87 ಅಡಿಯಲ್ಲಿ 50 ಸಾವಿರ ರು.ದಂಡ ವಿಧಿಸುವುದನ್ನು ಕಡ್ಡಾಯಗೊಳಿಸಿರುವಾಗ, ಅದಕ್ಕಿಂತ ಕಡಿಮೆ ಪ್ರಮಾಣ ದಂಡ ವಿಧಿಸಲು ನ್ಯಾಯಾಲಯಕ್ಕೆ ಅವಕಾಶವಿರುವುದಿಲ್ಲ. ಇದರಿಂದ ಕಡಿಮೆ ದಂಡ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಕ್ರಮ ಒಪ್ಪಲಾಗದು ಎಂದು ತಿಳಿಸಿದ ಹೈಕೋರ್ಟ್.

ಪುಟ್ಟರಾಜು ಗೌರವ ಕೊಟ್ಟು ಗೌರವ ತೆಗೆದುಕೊಳ್ಳುವುದನ್ನು ಕಲಿಯಲಿ: ಸಚಿವ ಚಲುವರಾಯಸ್ವಾಮಿ

ದೇವರಾಜಾಚಾರಿಗೆ ಸೆಕ್ಷನ್ 86 ಹಾಗೂ 87 ಅಡಿಯಲ್ಲಿ ತಲಾ 50 ಸಾವಿರ ರು. ದಂಡಕ್ಕೆ ಏರಿಸಿ (ಒಟ್ಟು ಒಂದು ಲಕ್ಷ) ಆದೇಶಿಸಿತು. ಜೊತೆಗೆ, ಈ ಎರಡೂ ಸೆಕ್ಷನ್ ಅಡಿ 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯ ಯಾಲಯದ ಆದೇಶ ಎತ್ತಿಹಿಡಿದು ಸರ್ಕಾರದ ಮೇಲ್ಮನವಿಯನ್ನು ಪುರಸ್ಕರಿಸಿದೆ. ಇದೇ ವೇಳೆ ತನಗೆ ಶಿಕ್ಷೆ ಹಾಗೂ ದಂಡ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಆದೇಶ ರದುಪಡಿಸಬೇಕು ಎಂದು ಕೋರಿ ಆರೋಪಿ ದೇವರಾಜಾಚಾರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

‘ಋತುಚಕ್ರ ರಜೆ’ಗೆ ತಡೆ ನೀಡಿ ಹಿಂಪಡೆದ ಹೈಕೋರ್ಟ್‌
ಎಂಎಸ್ಪಿ ಅಡಿಯಲ್ಲಿ ತೊಗರಿ ಖರೀದಿ ಆರಂಭಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ